10:02 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

21/11/2023, 18:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಎಲ್ಲ ಕೋಮಿನ ಯಜಮಾನರು, ಮುಖಂಡರು ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದ ಸಿದ್ದಯ್ಯನ ಹುಂಡಿ ವೃತ್ತದಲ್ಲಿ ನೂತನ ಮದ್ಯದ ಅಂಗಡಿ ತೆರೆಯಲಾಗಿದೆ. ಮಹಿಳೆಯರು ಮಕ್ಕಳು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ವಾಸಿಸುವ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಅಕ್ಷಮ್ಯ ಅಪರಾಧ. ಇದರಿಂದಾಗಿ ಕಸುವಿನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಕುಡಿತದ ಚಟಕ್ಕೆ ಬಲಿಯಾಗಿ ಅಶಾಂತಿ ವಾತಾವರಣ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ.


ಎಲ್ಲಾ ವರ್ಗದ ಜನರು ಅಣ್ಣ-ತಮ್ಮಂದಿರ ರೀತಿಯಲ್ಲಿ ಶಾಂತಿಯುತವಾಗಿ ಬದುಕು ಸಾಗಿಸುತ್ತಿದ್ದೇವೆ.ಇಂತಹ ಸ್ಥಳದಲ್ಲಿ ಮದ್ಯದ ಅಂಗಡಿ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ನಂಜನಗೂಡಿನ ತಾಲೂಕು ಆಡಳಿತ ಎಚ್ಚೆತ್ತು ಪ್ರಾರಂಭವಾಗಿರುವ ಮಧ್ಯದ ಅಂಗಡಿಯನ್ನ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಹಸುವಿನಹಳ್ಳಿ ಗ್ರಾಮದ ಗೌಡಿಕೆ ಯಜಮಾನರಾದ ಕೆ.ಎಂ. ಶಿವಮೂರ್ತಿ, ಶಿವಪ್ಪ , ಗ್ರಾಪಂ ಅಧ್ಯಕ್ಷರಾದ ಮಂಜುಳಾ ದೊರೆಸ್ವಾಮಿ, ಮಹದೇವಸ್ವಾಮಿ , ಮಹದೇವ ಸೇರಿದಂತೆ ನೂರಾರು ಮುಖಂಡರು ಸಾರ್ವಜನಿಕರು ಗ್ರಾಮಸ್ಥರು ಸಂಘ ಸಂಸ್ಥೆಯ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು