4:30 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

21/11/2023, 18:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಎಲ್ಲ ಕೋಮಿನ ಯಜಮಾನರು, ಮುಖಂಡರು ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದ ಸಿದ್ದಯ್ಯನ ಹುಂಡಿ ವೃತ್ತದಲ್ಲಿ ನೂತನ ಮದ್ಯದ ಅಂಗಡಿ ತೆರೆಯಲಾಗಿದೆ. ಮಹಿಳೆಯರು ಮಕ್ಕಳು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ವಾಸಿಸುವ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಅಕ್ಷಮ್ಯ ಅಪರಾಧ. ಇದರಿಂದಾಗಿ ಕಸುವಿನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಕುಡಿತದ ಚಟಕ್ಕೆ ಬಲಿಯಾಗಿ ಅಶಾಂತಿ ವಾತಾವರಣ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ.


ಎಲ್ಲಾ ವರ್ಗದ ಜನರು ಅಣ್ಣ-ತಮ್ಮಂದಿರ ರೀತಿಯಲ್ಲಿ ಶಾಂತಿಯುತವಾಗಿ ಬದುಕು ಸಾಗಿಸುತ್ತಿದ್ದೇವೆ.ಇಂತಹ ಸ್ಥಳದಲ್ಲಿ ಮದ್ಯದ ಅಂಗಡಿ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ನಂಜನಗೂಡಿನ ತಾಲೂಕು ಆಡಳಿತ ಎಚ್ಚೆತ್ತು ಪ್ರಾರಂಭವಾಗಿರುವ ಮಧ್ಯದ ಅಂಗಡಿಯನ್ನ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಹಸುವಿನಹಳ್ಳಿ ಗ್ರಾಮದ ಗೌಡಿಕೆ ಯಜಮಾನರಾದ ಕೆ.ಎಂ. ಶಿವಮೂರ್ತಿ, ಶಿವಪ್ಪ , ಗ್ರಾಪಂ ಅಧ್ಯಕ್ಷರಾದ ಮಂಜುಳಾ ದೊರೆಸ್ವಾಮಿ, ಮಹದೇವಸ್ವಾಮಿ , ಮಹದೇವ ಸೇರಿದಂತೆ ನೂರಾರು ಮುಖಂಡರು ಸಾರ್ವಜನಿಕರು ಗ್ರಾಮಸ್ಥರು ಸಂಘ ಸಂಸ್ಥೆಯ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು