3:14 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

21/11/2023, 18:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಎಲ್ಲ ಕೋಮಿನ ಯಜಮಾನರು, ಮುಖಂಡರು ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದ ಸಿದ್ದಯ್ಯನ ಹುಂಡಿ ವೃತ್ತದಲ್ಲಿ ನೂತನ ಮದ್ಯದ ಅಂಗಡಿ ತೆರೆಯಲಾಗಿದೆ. ಮಹಿಳೆಯರು ಮಕ್ಕಳು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ವಾಸಿಸುವ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಅಕ್ಷಮ್ಯ ಅಪರಾಧ. ಇದರಿಂದಾಗಿ ಕಸುವಿನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಕುಡಿತದ ಚಟಕ್ಕೆ ಬಲಿಯಾಗಿ ಅಶಾಂತಿ ವಾತಾವರಣ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ.


ಎಲ್ಲಾ ವರ್ಗದ ಜನರು ಅಣ್ಣ-ತಮ್ಮಂದಿರ ರೀತಿಯಲ್ಲಿ ಶಾಂತಿಯುತವಾಗಿ ಬದುಕು ಸಾಗಿಸುತ್ತಿದ್ದೇವೆ.ಇಂತಹ ಸ್ಥಳದಲ್ಲಿ ಮದ್ಯದ ಅಂಗಡಿ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ನಂಜನಗೂಡಿನ ತಾಲೂಕು ಆಡಳಿತ ಎಚ್ಚೆತ್ತು ಪ್ರಾರಂಭವಾಗಿರುವ ಮಧ್ಯದ ಅಂಗಡಿಯನ್ನ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಹಸುವಿನಹಳ್ಳಿ ಗ್ರಾಮದ ಗೌಡಿಕೆ ಯಜಮಾನರಾದ ಕೆ.ಎಂ. ಶಿವಮೂರ್ತಿ, ಶಿವಪ್ಪ , ಗ್ರಾಪಂ ಅಧ್ಯಕ್ಷರಾದ ಮಂಜುಳಾ ದೊರೆಸ್ವಾಮಿ, ಮಹದೇವಸ್ವಾಮಿ , ಮಹದೇವ ಸೇರಿದಂತೆ ನೂರಾರು ಮುಖಂಡರು ಸಾರ್ವಜನಿಕರು ಗ್ರಾಮಸ್ಥರು ಸಂಘ ಸಂಸ್ಥೆಯ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು