3:11 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

21/11/2023, 18:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ಎಲ್ಲ ಕೋಮಿನ ಯಜಮಾನರು, ಮುಖಂಡರು ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದ ಸಿದ್ದಯ್ಯನ ಹುಂಡಿ ವೃತ್ತದಲ್ಲಿ ನೂತನ ಮದ್ಯದ ಅಂಗಡಿ ತೆರೆಯಲಾಗಿದೆ. ಮಹಿಳೆಯರು ಮಕ್ಕಳು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ವಾಸಿಸುವ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಅಕ್ಷಮ್ಯ ಅಪರಾಧ. ಇದರಿಂದಾಗಿ ಕಸುವಿನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಕುಡಿತದ ಚಟಕ್ಕೆ ಬಲಿಯಾಗಿ ಅಶಾಂತಿ ವಾತಾವರಣ ನಿರ್ಮಾಣವಾಗುವುದರಲ್ಲಿ ಅನುಮಾನವೇ ಇಲ್ಲ.


ಎಲ್ಲಾ ವರ್ಗದ ಜನರು ಅಣ್ಣ-ತಮ್ಮಂದಿರ ರೀತಿಯಲ್ಲಿ ಶಾಂತಿಯುತವಾಗಿ ಬದುಕು ಸಾಗಿಸುತ್ತಿದ್ದೇವೆ.ಇಂತಹ ಸ್ಥಳದಲ್ಲಿ ಮದ್ಯದ ಅಂಗಡಿ ಸ್ಥಾಪನೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ನಂಜನಗೂಡಿನ ತಾಲೂಕು ಆಡಳಿತ ಎಚ್ಚೆತ್ತು ಪ್ರಾರಂಭವಾಗಿರುವ ಮಧ್ಯದ ಅಂಗಡಿಯನ್ನ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಹಸುವಿನಹಳ್ಳಿ ಗ್ರಾಮದ ಗೌಡಿಕೆ ಯಜಮಾನರಾದ ಕೆ.ಎಂ. ಶಿವಮೂರ್ತಿ, ಶಿವಪ್ಪ , ಗ್ರಾಪಂ ಅಧ್ಯಕ್ಷರಾದ ಮಂಜುಳಾ ದೊರೆಸ್ವಾಮಿ, ಮಹದೇವಸ್ವಾಮಿ , ಮಹದೇವ ಸೇರಿದಂತೆ ನೂರಾರು ಮುಖಂಡರು ಸಾರ್ವಜನಿಕರು ಗ್ರಾಮಸ್ಥರು ಸಂಘ ಸಂಸ್ಥೆಯ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು