12:58 PM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನನಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ವಿವೇಚನೆ ಬಿಟ್ಟಿದ್ದು: ಶಾಸಕ ಮಹೇಶ್ ಕಮಟಳ್ಳಿ

02/08/2021, 17:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಬಿಜೆಪಿ 

ಹೈಕಮಾಂಡ್ ಗೆ ಸಂಬಂಧಿಸಿದ ವಿಷಯ ಆಗಿದೆ. ನನಗೆ ಸಚಿವ ನೀಡಬೇಕೆಂದು ಪಕ್ಷದಲ್ಲಿ ಬೇಡಿಕೆ ಇದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.


ನಮ್ಮಪಕ್ಷದ ವರಿಷ್ಠರು, ನಮ್ಮ ನಾಯಕರಾದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆಯೋ ಅದಕ್ಕೆ ತಾನು ಬದ್ಧನಿದ್ದೇನೆ. ನನ್ನನ್ನು ಸಚಿವ ಮಾಡುವುದು ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಈಗಾಗಲೇ ಕೃಷ್ಣಾ ನದಿ ತೀರದ 22 ಹಳ್ಳಿಗಳು ಸಂಪೂರ್ಣ ಜಲಾವೃತವಾಗಿದೆ. ಅಲ್ಲಿನ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜತೆ ಮಾತನಾಡಿ ವ್ಯವಸ್ಥೆ ಮಾಡುವುದಾಗಿ ಅವರು ಭರವಸೆ ನೀಡಿದರು.

ಪ್ರವಾಹದ ಸಂದರ್ಭದಲ್ಲಿ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳ ಕುರಿತು ಅವಲೋಕಿಸಿದ್ದೇನೆ. ಶೀಘ್ರವಾಗಿ ಸರಕಾರದಿಂದ ಪರಿಹಾರ ಕೊಡಿಸುವುದಾಗಿ ಅವರು ಹೇಳಿದರು 


ಕೃಷ್ಣಾ ನದಿ ಪ್ರವಾಹದಲ್ಲಿ ಜಲಾವೃತವಾದ ಗ್ರಾಮಗಳಿಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಭೇಟಿ ನೀಡಿ ನಿರಾಶ್ರಿತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು