7:30 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಳಿಗೆರೆ ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳ ಸಸ್ಪೆಂಡ್

22/11/2023, 10:53

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್ ಹಾಗೂ ಪೇದೆ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
ಗ್ರಾಮದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 12ರಂದು ಬಿಳಿಗೆರೆ ಠಾಣೆಯ ಪಿಎಸ್ಸೈ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿರುತ್ತಾರೆ.
ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಸೈ ರವರು ತೆರಳಿದ್ದ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿಯ ಕರ್ತವ್ಯದಲ್ಲಿದ್ದ ಪೇದೆ ಗಳಾದ ನಂಜೇಶ್ ಹಾಗೂ ಪ್ರಸನ್ನಕುಮಾರ್ ರವರದ್ದಾಗಿರುತ್ತದೆ.
ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ. ಆಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಗ್ರಾಮಕ್ಕೆ ಬಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಸುಟ್ಟು ಗಾಯಗೊಂಡ ಆತನನ್ನು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದಾನೆ.
ಕರ್ತವ್ಯಲೋಪದ ಹಿನ್ನಲೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಅವರು ನೀಡಿದ ವರದಿ ಆಧಾರದ ಮೇಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು