3:42 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ.!?

22/11/2023, 12:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿನ ಕೆಲ ಹಾಸ್ಟೆಲ್ ಗಳಲ್ಲಿ ವಾಂತಿ ಬೇದಿ ಪ್ರಕರಣ ಕಂಡು ಬಂದಿದ್ದು, ಮಾಹಿತಿ ತೀರ‍ಾ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಕೆಲ ವಿದ್ಯಾರ್ಥಿಗಳಿಗೆ, ವಾಂತಿ ಬೇದಿ ಕಾಣಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕಳೆದ ವಾರದಿಂದ ಈವರೆಗೆ ಐದರಿಂದ ಹತ್ತು ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಅವರನ್ನು ವಸತಿ ನಿಲಯದ ಆರೋಗ್ಯ ಸಿಬ್ಬಂದಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುದು ಚಿಕಿತ್ಸೆ ಒದಗಿಸಿದ್ದಾರೆ. ಕೆಲ ವಿದ್ಯಾರ್ಥಿಗಳ ಪೋಷಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು, ಕೆಲ ಪೋಷಕರು ಅಗಮಿಸಿ ಕೆಲ ದಿನಗಳ ಮಟ್ಟಿಗೆ ತಮ್ಮ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡೋಗಿದ್ದಾರೆ. ವಸತಿ ನಿಲಯದಲ್ಲಿ ಕಾಣಿಸಿಕೊಂಡಿರುವ ವಾಂತಿ ಬೇದಿ ಪ್ರಕರಣಕ್ಕೆ, ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಕೆಲವರು ಪ್ರಥಮ ಚಿಕಿತ್ಸೆ ಪಡೆದು ವಸತಿ ನಿಲಯದಲ್ಲಿ ವಿಶ್ರಾಂತಿ ಪಡೆದಿದ್ದು. ಹಲವರು ಪೋಷಕರನ್ನು ಸಂಪರ್ಕಿಸಿ, ಅವರೊಂದಿಗೆ ತಮ್ಮೂರಿಗೆ ವಿಶ್ರ‍ಾಂತಿಗೆಂದು ತೆರಳಿದ್ದಾರೆ. ಕೂಡಲೇ ಸಂಬಂಧಿಸಿದ ಇಲಾಖಾ ಉನ್ನತಾಧಿಕಾರಿಗಳು, ವಸತಿ ನಿಲಯಕ್ಕೆ ಬೇಟಿ ನೀಡಿ ಪರಿಶೀಲನೆ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ. ಸಂಬಂಧಿಸಿದ ಉನ್ನತಾಧಿಕಾರಿಗಳು ವಸತಿ ನಿಲಯಕ್ಕೆ ತಿಂಗಳ ಹಿಂದೆಯಷ್ಟೆ ಭೇಟಿ ನೀಡಿದ್ದಾರಂತೆ, ಆದರೆ ಅವರು ಹೀಗೆ ಬಂದು ಹಾಗೇ ಹೋದರು ಎಂಬಂತೆ ಬಂದು ಹೋಗುತ್ತಿದ್ದಾರೆ. ಈ ವರೆಗೂ ವಸತಿ ನಿಲಯಕ್ಕೆ ಭೇಟಿ ನೀಡಿರುವ ಬಗ್ಗೆ ಸಂಬಂಧಿಸಿದ ಇಲಾಖೆಯ, ಸ್ಥಳೀಯ ಅಧಿಕಾರಿ ಮಾಧ್ಯಮಗಳಿಗೆ ಯಾವುದೇ ಮಾಹತಿ ನೀಡುವುದಿಲ್ಲ ಇದು ಕೆಲ ಪತ್ರಕರ್ತರಲ್ಲಿ ಹತ್ತಾರು ಅನುಮಾನಗಳನ್ನು ಹುಟ್ಟಿಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು