3:25 PM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ.!?

22/11/2023, 12:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿನ ಕೆಲ ಹಾಸ್ಟೆಲ್ ಗಳಲ್ಲಿ ವಾಂತಿ ಬೇದಿ ಪ್ರಕರಣ ಕಂಡು ಬಂದಿದ್ದು, ಮಾಹಿತಿ ತೀರ‍ಾ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಕೆಲ ವಿದ್ಯಾರ್ಥಿಗಳಿಗೆ, ವಾಂತಿ ಬೇದಿ ಕಾಣಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕಳೆದ ವಾರದಿಂದ ಈವರೆಗೆ ಐದರಿಂದ ಹತ್ತು ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಅವರನ್ನು ವಸತಿ ನಿಲಯದ ಆರೋಗ್ಯ ಸಿಬ್ಬಂದಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುದು ಚಿಕಿತ್ಸೆ ಒದಗಿಸಿದ್ದಾರೆ. ಕೆಲ ವಿದ್ಯಾರ್ಥಿಗಳ ಪೋಷಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು, ಕೆಲ ಪೋಷಕರು ಅಗಮಿಸಿ ಕೆಲ ದಿನಗಳ ಮಟ್ಟಿಗೆ ತಮ್ಮ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡೋಗಿದ್ದಾರೆ. ವಸತಿ ನಿಲಯದಲ್ಲಿ ಕಾಣಿಸಿಕೊಂಡಿರುವ ವಾಂತಿ ಬೇದಿ ಪ್ರಕರಣಕ್ಕೆ, ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಕೆಲವರು ಪ್ರಥಮ ಚಿಕಿತ್ಸೆ ಪಡೆದು ವಸತಿ ನಿಲಯದಲ್ಲಿ ವಿಶ್ರಾಂತಿ ಪಡೆದಿದ್ದು. ಹಲವರು ಪೋಷಕರನ್ನು ಸಂಪರ್ಕಿಸಿ, ಅವರೊಂದಿಗೆ ತಮ್ಮೂರಿಗೆ ವಿಶ್ರ‍ಾಂತಿಗೆಂದು ತೆರಳಿದ್ದಾರೆ. ಕೂಡಲೇ ಸಂಬಂಧಿಸಿದ ಇಲಾಖಾ ಉನ್ನತಾಧಿಕಾರಿಗಳು, ವಸತಿ ನಿಲಯಕ್ಕೆ ಬೇಟಿ ನೀಡಿ ಪರಿಶೀಲನೆ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ. ಸಂಬಂಧಿಸಿದ ಉನ್ನತಾಧಿಕಾರಿಗಳು ವಸತಿ ನಿಲಯಕ್ಕೆ ತಿಂಗಳ ಹಿಂದೆಯಷ್ಟೆ ಭೇಟಿ ನೀಡಿದ್ದಾರಂತೆ, ಆದರೆ ಅವರು ಹೀಗೆ ಬಂದು ಹಾಗೇ ಹೋದರು ಎಂಬಂತೆ ಬಂದು ಹೋಗುತ್ತಿದ್ದಾರೆ. ಈ ವರೆಗೂ ವಸತಿ ನಿಲಯಕ್ಕೆ ಭೇಟಿ ನೀಡಿರುವ ಬಗ್ಗೆ ಸಂಬಂಧಿಸಿದ ಇಲಾಖೆಯ, ಸ್ಥಳೀಯ ಅಧಿಕಾರಿ ಮಾಧ್ಯಮಗಳಿಗೆ ಯಾವುದೇ ಮಾಹತಿ ನೀಡುವುದಿಲ್ಲ ಇದು ಕೆಲ ಪತ್ರಕರ್ತರಲ್ಲಿ ಹತ್ತಾರು ಅನುಮಾನಗಳನ್ನು ಹುಟ್ಟಿಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು