3:00 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನ.28- ಡಿ.3: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ

23/11/2023, 11:17

ಮಂಗಳೂರು(reporterkarnataka.com): ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವವು ಶ್ರೀ ವಿಷ್ಣು ಸಹಸ್ರನಾಮ, ಯಾಗ ಮತ್ತಿತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿಯ ಅಧ್ಯಕ್ಷ ಕೆ.ಶ್ರೀನಿವಾಸ ಭಟ್, ನ.28ರ ಸಂಜೆ 4ರಿಂದ ಕಾವೂರು ವೃತ್ತದಿಂದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ‘ಮಹಾಭಾರತ’ ಮಹಾನ್ ಕೃತಿಯನ್ನು ಅಲಂಕೃತ ಪಲ್ಲಕಿಯಲ್ಲಿ ಇಟ್ಟು ಮೆರವಣಿಗೆ ಮೂಲಕ ತರಲಾಗುವುದು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳಬೇಕು ಎಂದರು.
ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2005ರಲ್ಲಿ ಆರಂಭಗೊಂಡ ಈ ಪ್ರವಚನ ಮಾಲಿಕೆ ಪ್ರತಿ ಸೋಮವಾರ ಸಂಜೆ ನಡೆಯುತ್ತಿತ್ತು. ಇದೀಗ 18 ವರ್ಷಗಳನ್ನು ಪೂರ್ಣಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಲೋತ್ಸವ ಆಯೋಜಿಸಲಾಗಿದೆ. ಇದೊಂದು ಅದ್ಭುತ ಪರಿಕಲ್ಪನೆಯಾಗಿದೆ. ಜೀವನ ಮೌಲ್ಯವನ್ನು ಮಹಾಭಾರತ ಪ್ರವಚನಗಳ ಮೂಲಕ ತಿಳಿಸಿಕೊಡುವ ಕಾರ್ಯ ನಿರಂತರವಾಗಿ ನಡೆದಿದೆ ಎಂದರು.
ನ.28ರ ಸಂಜೆ 5.30ಕ್ಕೆ ಜ್ಞಾನ ಸತ್ರದ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮ ಜರಗಲಿದೆ. ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದು, ಬ್ರಹ್ಮಶ್ರೀ ನರಸಿಂಹ ತಂತ್ರಿ ಕುಡುಪು ಇವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಶ್ರೀನಿವಾಸ ಭಟ್ ವಿವರಿಸಿದರು.
ನ.28ರಿಂದ ಡಿ.3ರವರೆಗೆ ಪ್ರತಿ ದಿನ ಸಂಜೆ ಸಭಾ ಕಾರ್ಯಕ್ರಮ, ಮಹಾಭಾರತದ ಕುರಿತ ಪ್ರವಚನವನ್ನು ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಡಲಿದ್ದಾರೆ ಎಂದವರು ತಿಳಿಸಿದರು.
ಡಿ.3ರಂದು ಸಂಜೆ 5ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ಅಧ್ಯಕ್ಷತೆ ವಹಿಸುವರು. ಈ ಸಂದರ್ಭ, ಕಳೆದ 18 ವರ್ಷಗಳಿಂದ ಪ್ರತಿ ಸೋಮವಾರ ಸಂಜೆ ಶ್ರೀ ಮನ್ಮಹಾಭಾರತ ಪ್ರವಚನ ನಡೆಸಿಕೊಟ್ಟ ಶ್ರೀ ಲಕ್ಷ್ಮೀಶ ಆಚಾರ್ಯ ಅವರಿಗೆ ಸನ್ಮಾನ ನೆರವೇರಲಿದೆ ಎಂದು ಶ್ರೀನಿವಾಸ ಭಟ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮಾನಂದ ಭಂಡಾರಿ, ಪ್ರಧಾನ ಸಲಹೆಗಾರ ಪಿ.ಎಸ್.ಪ್ರಕಾಶ್, ಜೊತೆ ಕಾರ್ಯದರ್ಶಿ ಸುಮಂತ್ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು