7:39 PM Sunday5 - April 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ

ಇತ್ತೀಚಿನ ಸುದ್ದಿ

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ

23/11/2023, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು.ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ. ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿರುತ್ತಾರೆ. ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದು ಒಬ್ಬಳೇ ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದಾರೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಔಷಧಿಗೆ ಶೇ 50ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋಥೆರಪಿ ನೀಡುತ್ತಿದ್ದಾರೆ.


ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದೆ. ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು.ಅಥವಾ ಧಾನಿಗಳು ಖಾತೆ ಸಂಖ್ಯೆ 0692500136635601. ಐಎಫ್ ಎಸ್ ಸಿ ಕೋಡ್ : ಕೆಎಆರ್ ಬಿ0000069. ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು