1:25 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ

23/11/2023, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು.ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ. ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿರುತ್ತಾರೆ. ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದು ಒಬ್ಬಳೇ ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದಾರೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಔಷಧಿಗೆ ಶೇ 50ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋಥೆರಪಿ ನೀಡುತ್ತಿದ್ದಾರೆ.


ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದೆ. ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು.ಅಥವಾ ಧಾನಿಗಳು ಖಾತೆ ಸಂಖ್ಯೆ 0692500136635601. ಐಎಫ್ ಎಸ್ ಸಿ ಕೋಡ್ : ಕೆಎಆರ್ ಬಿ0000069. ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು