5:54 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಹೆಚ್ಚುತ್ತಿದೆ ಕೊರೊನಾ ಪಾಸಿಟಿವ್ ರೇಟ್ : ಮತ್ತೆ ಲಾಕ್ ಡೌನ್ ನತ್ತ ಮುಖ ಮಾಡಿದ ಸಿಲಿಕಾನ್ ಸಿಟಿ, ಕಡಲ ನಗರಿ !

02/08/2021, 21:24

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮತ್ತೊಮ್ಮೆ ಲಾಕ್ ಡೌನ್ ನತ್ತ ಮುಖ ಮಾಡಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಕೊರೊನಾ ಪ್ರಕರಣಗಳು 

ವಿಪರೀತ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸೀಲ್ಡೌನ್ ಗೆ ಮುಂದಾಗಿದೆ. ಹೆಚ್ಚು ಪ್ರಕರಣ ಪತ್ತೆ ಆಗಿರುವ ಮನೆಗಳಿಗೆ ಸೀಲ್ ಡೌನ್ ಮಾಡಲಾಗುತ್ತಿದೆ. ಇನ್ನು ಹೈರಿಸ್ಕ್ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯವಾಗಿದೆ. 

ಅದು ಕೂಡ ಬಿಬಿಎಂಪಿ ಸೂಚಿಸಿದ ಸ್ಥಳದಲ್ಲಿಯೇ ಕ್ವಾರಂಟೈನ್ ಆಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. 

ಕ್ವಾರಂಟೈನ್ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುವುದು. ಟೆಸ್ಟ್‌ನಲ್ಲಿ ನೆಗೆಟಿವ್ ವರದಿ ಬಂದರಷ್ಟೇ ಮನೆಗೆ ವಾಪಸ್ ಕಳಿಸಲಾಗುತ್ತೆ. ಕೇರಳದಿಂದ ಬರುವವರು ಕೋವಿಡ್ ನೆಗೆಟಿವ್ ವರದಿ ತರಬೇಕು ಎಂದರು.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ. ಹೈ ರಿಸ್ಕ್ ರಾಜ್ಯದಿಂದ ಬರುವ ಪ್ರಯಾಣಿಕರಿಗೆ ಅಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಆದರೆ ಹಣ ಪಾವತಿಸಬೇಕು. ಕೊವಿಡ್ ಕೇರ್ ಸೆಂಟರ್‌ನಲ್ಲಿ ಹಣ ಪಾವತಿಸಬೇಕಾಗಿಲ್ಲ.

ವೀಕೆಂಡ್ ಲಾಕ್‌ಡೌನ್ ಬಗ್ಗೆ ಬಿಬಿಎಂಪಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸಾಮಾನ್ಯ ಜನರು ಜೀವನ ನಡೆಸಬೇಕಾಗಿದೆ. ಕೊರೊನಾ ಸೋಂಕಿಗೆ ಪೂರ್ವ ಸಿದ್ಧತೆ ಆಗಬೇಕಾಗಿದೆ. ಸರ್ಕಾರದ ಹಂತದಲ್ಲಿ ಅಂತಿಮ‌ ತೀರ್ಮಾನ ಆಗಲಿದೆ. ಕೊರೊನಾ ಕೇಸ್‌ಗಳು 500ಕ್ಕಿಂತ ಕಡಿಮೆ ಬರುತ್ತಿದೆ. ಕಂಟೇನ್‌ಮೆಂಟ್ ವಿಚಾರದಲ್ಲಿ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು