5:05 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ: ಕಾಡಿಗೆ ಎಳೆದೊಯ್ದ ಹುಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ

25/11/2023, 13:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಾಡಹಗಲೇ ನರಭಕ್ಷಕ ಹುಲಿಯೊಂದು ಕುರಿಗಾಹಿ ಮಹಿಳೆ ಮೇಲೆ ದಾಳಿ ನಡೆಸಿ ಕೊಂದು ಹಾಕಿದರ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ರತ್ನಮ್ಮ(50) ಎಂಬುವರೇ ನರಭಕ್ಷಕ ಹುಲಿಗೆ ಬಲಿಯಾದ ಮೃತ ಮಹಿಳೆ.


ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ ಪತ್ನಿ ಈ ಮೃತ ಮಹಿಳೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಮಹಿಳೆಯ ಮೇಲೆ ವ್ಯಾಘ್ರ ದಾಳಿ ನಡೆಸಿದೆ. ಹುಲಿಯು
ರತ್ನಮ್ಮ ಅವರನ್ನು ಜಮೀನಿನಿಂದ ಕಾಡಿನೊಳಗೆ ಎಳೆದೊಯ್ದಿದೆ.
ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಕಾಡಿನಿಂದ ಹುಡುಕಿ ಗ್ರಾಮಸ್ಥರು ತಂದಿದ್ದಾರೆ.
ಸುಮಾರು ಒಂದು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೆ ನರಭಕ್ಷಕ ಹುಲಿ ದಾಳಿ ಮಾಡಿತ್ತು. ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ ಈಗ ಮತ್ತೆ ದನಗಾಯಿ ಮಹಿಮೆ ಬಲಿಯಾಗಿದ್ದಾರೆ. ಹೆಡಿಯಾಲ ಬಳ್ಳೂರು ಹುಂಡಿ ಮಹದೇವ ನಗರ ಗ್ರಾಮದ ಸುತ್ತಮುತ್ತಲ ವಾಸಿಗಳು ಈಗ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಹೆಡಿಯಾಲ ಅರಣ್ಯ ಇಲಾಖೆಯ ಆರ್‌ಎಫ್‌ಒ ನಾರಾಯಣ ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಮೃತ ಮಹಿಳೆ ರತ್ನಮಳ ಮೃತ ದೇಹವನ್ನು ಹುಡುಕಿ ಗ್ರಾಮಕ್ಕೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು