7:29 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ: ಕಾಡಿಗೆ ಎಳೆದೊಯ್ದ ಹುಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ

25/11/2023, 13:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಾಡಹಗಲೇ ನರಭಕ್ಷಕ ಹುಲಿಯೊಂದು ಕುರಿಗಾಹಿ ಮಹಿಳೆ ಮೇಲೆ ದಾಳಿ ನಡೆಸಿ ಕೊಂದು ಹಾಕಿದರ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ರತ್ನಮ್ಮ(50) ಎಂಬುವರೇ ನರಭಕ್ಷಕ ಹುಲಿಗೆ ಬಲಿಯಾದ ಮೃತ ಮಹಿಳೆ.


ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ ಪತ್ನಿ ಈ ಮೃತ ಮಹಿಳೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಮಹಿಳೆಯ ಮೇಲೆ ವ್ಯಾಘ್ರ ದಾಳಿ ನಡೆಸಿದೆ. ಹುಲಿಯು
ರತ್ನಮ್ಮ ಅವರನ್ನು ಜಮೀನಿನಿಂದ ಕಾಡಿನೊಳಗೆ ಎಳೆದೊಯ್ದಿದೆ.
ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಕಾಡಿನಿಂದ ಹುಡುಕಿ ಗ್ರಾಮಸ್ಥರು ತಂದಿದ್ದಾರೆ.
ಸುಮಾರು ಒಂದು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೆ ನರಭಕ್ಷಕ ಹುಲಿ ದಾಳಿ ಮಾಡಿತ್ತು. ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ ಈಗ ಮತ್ತೆ ದನಗಾಯಿ ಮಹಿಮೆ ಬಲಿಯಾಗಿದ್ದಾರೆ. ಹೆಡಿಯಾಲ ಬಳ್ಳೂರು ಹುಂಡಿ ಮಹದೇವ ನಗರ ಗ್ರಾಮದ ಸುತ್ತಮುತ್ತಲ ವಾಸಿಗಳು ಈಗ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಹೆಡಿಯಾಲ ಅರಣ್ಯ ಇಲಾಖೆಯ ಆರ್‌ಎಫ್‌ಒ ನಾರಾಯಣ ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಮೃತ ಮಹಿಳೆ ರತ್ನಮಳ ಮೃತ ದೇಹವನ್ನು ಹುಡುಕಿ ಗ್ರಾಮಕ್ಕೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು