10:01 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಥೇಟ್ ಮಹಾತ್ಮ ಗಾಂಧೀಜಿಯಂತೆ ಇವರ ವೇಷ!: ರಾಷ್ಟ್ರಪಿತ ಪುತ್ಥಳಿಯಂತೆ ತಾಸುಗಟ್ಟಲೆ ಕದಲದೆ ನಿಲ್ಲುತ್ತಾರೆ!!

25/11/2023, 19:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದರ ನಿಮಿತ್ತಂ ಬಹುಕೃತ ವೇಷಂ ಎಂಬಂತೆ ಮನುಷ್ಯ ತನ್ನ ಜೀವನೋಪಾಯ ಹಾಗೂ ಹೊಟ್ಟೆಪಾಡಿಗಾಗಿ ಏನೆಲ್ಲಾ ಮಾಡುತ್ತಾನೆ ನೀವೇ ನೋಡಿ.
ಇಲ್ಲೊಬ್ಬ ವ್ಯಕ್ತಿ ತನ್ನ ಹೊಟ್ಟೆಪಾಡಿಗಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೆ ನಾಚಿಸುವಂತಹ ವೇಷದಾರಿಯಾಗಿ ನಿಂತಿದ್ದಾನೆ.
ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗ ದಿಢೀರ್ ಪ್ರತ್ಯಕ್ಷವಾದ ಈ ಮಹಾತ್ಮ ನೋಡುವುದಕ್ಕೆ ಥೇಟ್ ಮಹಾತ್ಮ ಗಾಂಧಿಯಂತೆಯೇ ಕಾಣುತ್ತಿದ್ದಾನೆ. ಇವನು ನಿಂತಿರುವ ಭಂಗಿ ಯಾವುದೇ ಮಹಾತ್ಮ ಗಾಂಧೀಜಿಯವರ ಚಿತ್ರ ಹಾಗೂ ಪುತ್ತಳಿಗಿಂತ ಕಮ್ಮಿ ಇಲ್ಲ. ತಲೆಯಿಂದ ಉಂಗುಷ್ಟದವರೆಗೂ ಒಂದು ರೀತಿ ಸಿಲ್ವರ್ ಬಣ್ಣ ಹಚ್ಚಿಕೊಂಡು ಕಣ್ಣಿಗೆ ಕನ್ನಡಕ ಕೈಯಲ್ಲಿ ಕೋಲು ಹಿಡಿದು ಕೊಂಡು ನಿಂತಿರುವ ದೃಶ್ಯ ಗಾಂಧೀಜಿ ಅವರ ಪುತ್ಥಳಿ ಯಂತೆ ಭಾಸವಾಗುತ್ತಿದೆ.


ಸುಡು ಬಿಸಿಲಿನಲ್ಲಿಯೇ ಯಾವುದೇ ಚಲನವಲನವಿಲ್ಲದೆ, ಕಣ್ಣು ಸಹ ಮಿಟುಕಿಸದೆ, ಮಾತನ್ನು ಸಹ ಆಡದೇ ನಿರ್ಜೀವ ಶಿಲೆಯಂತೆಯೇ ನಿಂತಿರುವ ಈತನ ಭಂಗಿ ನಿಜಕ್ಕೂ ಮೆಚ್ಚುವಂಥದ್ದೆ ಆಗಿದೆ.
ದೇವಾಲಯಕ್ಕೆ ಬರುವ ಭಕ್ತರು ಇದನ್ನು ನೋಡಿ ಇದೊಂದು ಪುತ್ತಳಿಯೇ ಇರಬೇಕು ಎಂದು ಭಾವಿಸಿದರೆ ಮತ್ತೆ ಕೆಲವರು ಆತನ ಮೈ ಕೈ ಹಾಗೂ ಕೋಲನ್ನು ಮುಟ್ಟಿ ಇದು ಪುತ್ಥಳಿಯೋ ಅಥವಾ ಮನುಷ್ಯನೋ ಎಂದು ಖಾತರಿಪಡಿಸಿಕೊಳ್ಳುತ್ತಿದ್ದರು.
ಕೆಲವು ಭಕ್ತರು ಭಕ್ತಿಯಿಂದ ಮುಟ್ಟಿ ನಮಸ್ಕರಿಸಿದರೆ ಮತ್ತೆ ಕೆಲವರು ಸೆಲ್ಫಿ ಹಾಗೂ ಫೋಟೋ ತೆಗೆಸಿಕೊಂಡು ಖುಷಿಪಟ್ಟು ತಮ್ಮ ಕೈಲಾದ ಹಣ ಸಹಾಯ ಮಾಡುತ್ತಿದ್ದರು.
ಒಟ್ಟಾರೆ ಯಾರೇ ಮುಟ್ಟಿದರು ಏನೇ ಮಾತನಾಡಿದರು ತಾನು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಜೀವ ವಸ್ತುವಿನಂತೆ ನಿಂತುಕೊಂಡೇ ಎಲ್ಲಾ ಸಾರ್ವಜನಿಕರ ಗಮನ ಸೆಳೆದ ಮಹಾತ್ಮ ಗಾಂಧಿ ವೇಷದಾರಿ.

ಇತ್ತೀಚಿನ ಸುದ್ದಿ

ಜಾಹೀರಾತು