3:44 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಥೇಟ್ ಮಹಾತ್ಮ ಗಾಂಧೀಜಿಯಂತೆ ಇವರ ವೇಷ!: ರಾಷ್ಟ್ರಪಿತ ಪುತ್ಥಳಿಯಂತೆ ತಾಸುಗಟ್ಟಲೆ ಕದಲದೆ ನಿಲ್ಲುತ್ತಾರೆ!!

25/11/2023, 19:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದರ ನಿಮಿತ್ತಂ ಬಹುಕೃತ ವೇಷಂ ಎಂಬಂತೆ ಮನುಷ್ಯ ತನ್ನ ಜೀವನೋಪಾಯ ಹಾಗೂ ಹೊಟ್ಟೆಪಾಡಿಗಾಗಿ ಏನೆಲ್ಲಾ ಮಾಡುತ್ತಾನೆ ನೀವೇ ನೋಡಿ.
ಇಲ್ಲೊಬ್ಬ ವ್ಯಕ್ತಿ ತನ್ನ ಹೊಟ್ಟೆಪಾಡಿಗಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೆ ನಾಚಿಸುವಂತಹ ವೇಷದಾರಿಯಾಗಿ ನಿಂತಿದ್ದಾನೆ.
ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗ ದಿಢೀರ್ ಪ್ರತ್ಯಕ್ಷವಾದ ಈ ಮಹಾತ್ಮ ನೋಡುವುದಕ್ಕೆ ಥೇಟ್ ಮಹಾತ್ಮ ಗಾಂಧಿಯಂತೆಯೇ ಕಾಣುತ್ತಿದ್ದಾನೆ. ಇವನು ನಿಂತಿರುವ ಭಂಗಿ ಯಾವುದೇ ಮಹಾತ್ಮ ಗಾಂಧೀಜಿಯವರ ಚಿತ್ರ ಹಾಗೂ ಪುತ್ತಳಿಗಿಂತ ಕಮ್ಮಿ ಇಲ್ಲ. ತಲೆಯಿಂದ ಉಂಗುಷ್ಟದವರೆಗೂ ಒಂದು ರೀತಿ ಸಿಲ್ವರ್ ಬಣ್ಣ ಹಚ್ಚಿಕೊಂಡು ಕಣ್ಣಿಗೆ ಕನ್ನಡಕ ಕೈಯಲ್ಲಿ ಕೋಲು ಹಿಡಿದು ಕೊಂಡು ನಿಂತಿರುವ ದೃಶ್ಯ ಗಾಂಧೀಜಿ ಅವರ ಪುತ್ಥಳಿ ಯಂತೆ ಭಾಸವಾಗುತ್ತಿದೆ.


ಸುಡು ಬಿಸಿಲಿನಲ್ಲಿಯೇ ಯಾವುದೇ ಚಲನವಲನವಿಲ್ಲದೆ, ಕಣ್ಣು ಸಹ ಮಿಟುಕಿಸದೆ, ಮಾತನ್ನು ಸಹ ಆಡದೇ ನಿರ್ಜೀವ ಶಿಲೆಯಂತೆಯೇ ನಿಂತಿರುವ ಈತನ ಭಂಗಿ ನಿಜಕ್ಕೂ ಮೆಚ್ಚುವಂಥದ್ದೆ ಆಗಿದೆ.
ದೇವಾಲಯಕ್ಕೆ ಬರುವ ಭಕ್ತರು ಇದನ್ನು ನೋಡಿ ಇದೊಂದು ಪುತ್ತಳಿಯೇ ಇರಬೇಕು ಎಂದು ಭಾವಿಸಿದರೆ ಮತ್ತೆ ಕೆಲವರು ಆತನ ಮೈ ಕೈ ಹಾಗೂ ಕೋಲನ್ನು ಮುಟ್ಟಿ ಇದು ಪುತ್ಥಳಿಯೋ ಅಥವಾ ಮನುಷ್ಯನೋ ಎಂದು ಖಾತರಿಪಡಿಸಿಕೊಳ್ಳುತ್ತಿದ್ದರು.
ಕೆಲವು ಭಕ್ತರು ಭಕ್ತಿಯಿಂದ ಮುಟ್ಟಿ ನಮಸ್ಕರಿಸಿದರೆ ಮತ್ತೆ ಕೆಲವರು ಸೆಲ್ಫಿ ಹಾಗೂ ಫೋಟೋ ತೆಗೆಸಿಕೊಂಡು ಖುಷಿಪಟ್ಟು ತಮ್ಮ ಕೈಲಾದ ಹಣ ಸಹಾಯ ಮಾಡುತ್ತಿದ್ದರು.
ಒಟ್ಟಾರೆ ಯಾರೇ ಮುಟ್ಟಿದರು ಏನೇ ಮಾತನಾಡಿದರು ತಾನು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಜೀವ ವಸ್ತುವಿನಂತೆ ನಿಂತುಕೊಂಡೇ ಎಲ್ಲಾ ಸಾರ್ವಜನಿಕರ ಗಮನ ಸೆಳೆದ ಮಹಾತ್ಮ ಗಾಂಧಿ ವೇಷದಾರಿ.

ಇತ್ತೀಚಿನ ಸುದ್ದಿ

ಜಾಹೀರಾತು