8:27 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಥೇಟ್ ಮಹಾತ್ಮ ಗಾಂಧೀಜಿಯಂತೆ ಇವರ ವೇಷ!: ರಾಷ್ಟ್ರಪಿತ ಪುತ್ಥಳಿಯಂತೆ ತಾಸುಗಟ್ಟಲೆ ಕದಲದೆ ನಿಲ್ಲುತ್ತಾರೆ!!

25/11/2023, 19:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದರ ನಿಮಿತ್ತಂ ಬಹುಕೃತ ವೇಷಂ ಎಂಬಂತೆ ಮನುಷ್ಯ ತನ್ನ ಜೀವನೋಪಾಯ ಹಾಗೂ ಹೊಟ್ಟೆಪಾಡಿಗಾಗಿ ಏನೆಲ್ಲಾ ಮಾಡುತ್ತಾನೆ ನೀವೇ ನೋಡಿ.
ಇಲ್ಲೊಬ್ಬ ವ್ಯಕ್ತಿ ತನ್ನ ಹೊಟ್ಟೆಪಾಡಿಗಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೆ ನಾಚಿಸುವಂತಹ ವೇಷದಾರಿಯಾಗಿ ನಿಂತಿದ್ದಾನೆ.
ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗ ದಿಢೀರ್ ಪ್ರತ್ಯಕ್ಷವಾದ ಈ ಮಹಾತ್ಮ ನೋಡುವುದಕ್ಕೆ ಥೇಟ್ ಮಹಾತ್ಮ ಗಾಂಧಿಯಂತೆಯೇ ಕಾಣುತ್ತಿದ್ದಾನೆ. ಇವನು ನಿಂತಿರುವ ಭಂಗಿ ಯಾವುದೇ ಮಹಾತ್ಮ ಗಾಂಧೀಜಿಯವರ ಚಿತ್ರ ಹಾಗೂ ಪುತ್ತಳಿಗಿಂತ ಕಮ್ಮಿ ಇಲ್ಲ. ತಲೆಯಿಂದ ಉಂಗುಷ್ಟದವರೆಗೂ ಒಂದು ರೀತಿ ಸಿಲ್ವರ್ ಬಣ್ಣ ಹಚ್ಚಿಕೊಂಡು ಕಣ್ಣಿಗೆ ಕನ್ನಡಕ ಕೈಯಲ್ಲಿ ಕೋಲು ಹಿಡಿದು ಕೊಂಡು ನಿಂತಿರುವ ದೃಶ್ಯ ಗಾಂಧೀಜಿ ಅವರ ಪುತ್ಥಳಿ ಯಂತೆ ಭಾಸವಾಗುತ್ತಿದೆ.


ಸುಡು ಬಿಸಿಲಿನಲ್ಲಿಯೇ ಯಾವುದೇ ಚಲನವಲನವಿಲ್ಲದೆ, ಕಣ್ಣು ಸಹ ಮಿಟುಕಿಸದೆ, ಮಾತನ್ನು ಸಹ ಆಡದೇ ನಿರ್ಜೀವ ಶಿಲೆಯಂತೆಯೇ ನಿಂತಿರುವ ಈತನ ಭಂಗಿ ನಿಜಕ್ಕೂ ಮೆಚ್ಚುವಂಥದ್ದೆ ಆಗಿದೆ.
ದೇವಾಲಯಕ್ಕೆ ಬರುವ ಭಕ್ತರು ಇದನ್ನು ನೋಡಿ ಇದೊಂದು ಪುತ್ತಳಿಯೇ ಇರಬೇಕು ಎಂದು ಭಾವಿಸಿದರೆ ಮತ್ತೆ ಕೆಲವರು ಆತನ ಮೈ ಕೈ ಹಾಗೂ ಕೋಲನ್ನು ಮುಟ್ಟಿ ಇದು ಪುತ್ಥಳಿಯೋ ಅಥವಾ ಮನುಷ್ಯನೋ ಎಂದು ಖಾತರಿಪಡಿಸಿಕೊಳ್ಳುತ್ತಿದ್ದರು.
ಕೆಲವು ಭಕ್ತರು ಭಕ್ತಿಯಿಂದ ಮುಟ್ಟಿ ನಮಸ್ಕರಿಸಿದರೆ ಮತ್ತೆ ಕೆಲವರು ಸೆಲ್ಫಿ ಹಾಗೂ ಫೋಟೋ ತೆಗೆಸಿಕೊಂಡು ಖುಷಿಪಟ್ಟು ತಮ್ಮ ಕೈಲಾದ ಹಣ ಸಹಾಯ ಮಾಡುತ್ತಿದ್ದರು.
ಒಟ್ಟಾರೆ ಯಾರೇ ಮುಟ್ಟಿದರು ಏನೇ ಮಾತನಾಡಿದರು ತಾನು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಜೀವ ವಸ್ತುವಿನಂತೆ ನಿಂತುಕೊಂಡೇ ಎಲ್ಲಾ ಸಾರ್ವಜನಿಕರ ಗಮನ ಸೆಳೆದ ಮಹಾತ್ಮ ಗಾಂಧಿ ವೇಷದಾರಿ.

ಇತ್ತೀಚಿನ ಸುದ್ದಿ

ಜಾಹೀರಾತು