6:32 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನ: ಮಂಗಳೂರಿನಲ್ಲಿ ಪಾದಯಾತ್ರೆ

03/08/2021, 08:18

ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ  ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು.

ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ವನಾಶಗೊಳಿಸಿದೆ. ಜನತೆಯ ಹಿತ ಕಾಪಾಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಧಾರೆ ಎರೆದು ಕೊಡುತ್ತಿದೆ. ರೈತ ವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಹೊರಟ ಕೇಂದ್ರ ಸರಕಾರವು ದೇಶದ ಕೃಷಿರಂಗವನ್ನೇ ಬುಡಮೇಲುಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಅಂದು ಈಸ್ಟ್ ಇಂಡಿಯಾ ಕಂಪೆನಿಯ ಮೂಲಕ ದೇಶದ ಸಂಪತ್ತನ್ನು ದೋಚಿದ ಬ್ರಿಟೀಷರ ವಿರುದ್ದ ದೇಶದ ಜನತೆ ಸಮರ ಧೀರ ಹೋರಾಟ ನಡೆಸಿದರೆ, ಇಂದು ನಮ್ಮ ದೇಶದ ಸಂಪತ್ತನ್ನು ಕೊಳ್ಳೆಹೊಡೆಯುತ್ತಿರುವ ನೂರಾರು ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶದ ರೈತ ಕಾರ್ಮಿಕರು ಒಂದಾಗಿ ಪ್ರಬಲ ಚಳುವಳಿ ರೂಪಿಸಬೇಕಾಗಿದೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಜಯಲಕ್ಷ್ಮಿ, ಸಂತೋಷ್ ಆರ್.ಎಸ್, ಅಶೋಕ್ ಸಾಲ್ಯಾನ್, ಕೃಷ್ಣ ತಣ್ಣೀರುಬಾವಿ, ಅನ್ವರ್ ಶೇಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು