4:12 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನ: ಮಂಗಳೂರಿನಲ್ಲಿ ಪಾದಯಾತ್ರೆ

03/08/2021, 08:18

ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ  ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು.

ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ವನಾಶಗೊಳಿಸಿದೆ. ಜನತೆಯ ಹಿತ ಕಾಪಾಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಧಾರೆ ಎರೆದು ಕೊಡುತ್ತಿದೆ. ರೈತ ವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಹೊರಟ ಕೇಂದ್ರ ಸರಕಾರವು ದೇಶದ ಕೃಷಿರಂಗವನ್ನೇ ಬುಡಮೇಲುಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಅಂದು ಈಸ್ಟ್ ಇಂಡಿಯಾ ಕಂಪೆನಿಯ ಮೂಲಕ ದೇಶದ ಸಂಪತ್ತನ್ನು ದೋಚಿದ ಬ್ರಿಟೀಷರ ವಿರುದ್ದ ದೇಶದ ಜನತೆ ಸಮರ ಧೀರ ಹೋರಾಟ ನಡೆಸಿದರೆ, ಇಂದು ನಮ್ಮ ದೇಶದ ಸಂಪತ್ತನ್ನು ಕೊಳ್ಳೆಹೊಡೆಯುತ್ತಿರುವ ನೂರಾರು ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶದ ರೈತ ಕಾರ್ಮಿಕರು ಒಂದಾಗಿ ಪ್ರಬಲ ಚಳುವಳಿ ರೂಪಿಸಬೇಕಾಗಿದೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಜಯಲಕ್ಷ್ಮಿ, ಸಂತೋಷ್ ಆರ್.ಎಸ್, ಅಶೋಕ್ ಸಾಲ್ಯಾನ್, ಕೃಷ್ಣ ತಣ್ಣೀರುಬಾವಿ, ಅನ್ವರ್ ಶೇಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು