11:45 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ  ಇಂದಿನಿಂದ ಮಂಗಳೂರಿಗೆ ಪ್ರವೇಶ

03/08/2021, 08:31

ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲಿ ತೆರಳಿಬೇಕಾಗಿದೆ.

ಮಂಗಳೂರು ಪ್ರವೇಶಿಸುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಬಸ್ ಪ್ರಯಾಣಿಕರು ಮಾತ್ರವಲ್ಲದೇ ಇತರ ಯಾವುದೇ ವಾಹನದಲ್ಲಿ ತೆರಳುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಕೊರೊನಾ  ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೂ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ತಲಪಾಡಿ ಗಡಿಯಲ್ಲಿ ಇದುವರೆಗೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆಯ ವತಿಯಿಂದ ನಡೆಸಲಾಗುತ್ತಿದ್ದ ಆರ್‌.ಟಿ.ಪಿ.ಸಿ.ಆರ್. ಪರೀಕ್ಷಾ ಕೇಂದ್ರವನ್ನು ಸೋಮವಾರ ತೆರವುಗೊಳಿಸಲಾಗಿದೆ. ಇದೀಗ ರಾಷ್ಟ್ರೀಯ ಹೆದ್ದಾರಿಯ ಮದ್ಯದಲ್ಲಿ ನಿರ್ಮಿಸಲಾಗಿದೆ.

ಇನ್ನು ಮಂಗಳೂರು ಕಡೆಯಿಂದ ತಲಪಾಡಿಗೆ ಬರುವ ಖಾಸಗಿ ಬಸ್‌ಗಳು ಟೋಲ್‌ಗೇಟ್‌ ವರೆಗೆ ಮಾತ್ರ ಬರಲು ಅವಕಾಶವಿದ್ದು, ಅಲ್ಲಿಂದ ಪ್ರಯಾಣಿಕರು ಇಳಿದು  100 ಮೀಟರ್ ದೂರ ಕಾಲ್ನಡಿಗೆಯಲ್ಲಿ ಮೇಲಿನ ಕೇರಳ ತಲಪಾಡಿಯ ಬಸ್ ತಂಗುದಾಣಕ್ಕೆ ನಡಕೊಂಡೆ ಬರಬೇಕಾಗಿದೆ. ಅಲ್ಲಿರುವ ಕಾಸರಗೋಡು ಕಡೆಗೆ ಬರುವ ಬಸ್ಸನ್ನು ಏರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು