8:10 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ  ಇಂದಿನಿಂದ ಮಂಗಳೂರಿಗೆ ಪ್ರವೇಶ

03/08/2021, 08:31

ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲಿ ತೆರಳಿಬೇಕಾಗಿದೆ.

ಮಂಗಳೂರು ಪ್ರವೇಶಿಸುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಬಸ್ ಪ್ರಯಾಣಿಕರು ಮಾತ್ರವಲ್ಲದೇ ಇತರ ಯಾವುದೇ ವಾಹನದಲ್ಲಿ ತೆರಳುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಕೊರೊನಾ  ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೂ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ತಲಪಾಡಿ ಗಡಿಯಲ್ಲಿ ಇದುವರೆಗೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆಯ ವತಿಯಿಂದ ನಡೆಸಲಾಗುತ್ತಿದ್ದ ಆರ್‌.ಟಿ.ಪಿ.ಸಿ.ಆರ್. ಪರೀಕ್ಷಾ ಕೇಂದ್ರವನ್ನು ಸೋಮವಾರ ತೆರವುಗೊಳಿಸಲಾಗಿದೆ. ಇದೀಗ ರಾಷ್ಟ್ರೀಯ ಹೆದ್ದಾರಿಯ ಮದ್ಯದಲ್ಲಿ ನಿರ್ಮಿಸಲಾಗಿದೆ.

ಇನ್ನು ಮಂಗಳೂರು ಕಡೆಯಿಂದ ತಲಪಾಡಿಗೆ ಬರುವ ಖಾಸಗಿ ಬಸ್‌ಗಳು ಟೋಲ್‌ಗೇಟ್‌ ವರೆಗೆ ಮಾತ್ರ ಬರಲು ಅವಕಾಶವಿದ್ದು, ಅಲ್ಲಿಂದ ಪ್ರಯಾಣಿಕರು ಇಳಿದು  100 ಮೀಟರ್ ದೂರ ಕಾಲ್ನಡಿಗೆಯಲ್ಲಿ ಮೇಲಿನ ಕೇರಳ ತಲಪಾಡಿಯ ಬಸ್ ತಂಗುದಾಣಕ್ಕೆ ನಡಕೊಂಡೆ ಬರಬೇಕಾಗಿದೆ. ಅಲ್ಲಿರುವ ಕಾಸರಗೋಡು ಕಡೆಗೆ ಬರುವ ಬಸ್ಸನ್ನು ಏರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು