12:58 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ  ಇಂದಿನಿಂದ ಮಂಗಳೂರಿಗೆ ಪ್ರವೇಶ

03/08/2021, 08:31

ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲಿ ತೆರಳಿಬೇಕಾಗಿದೆ.

ಮಂಗಳೂರು ಪ್ರವೇಶಿಸುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಬಸ್ ಪ್ರಯಾಣಿಕರು ಮಾತ್ರವಲ್ಲದೇ ಇತರ ಯಾವುದೇ ವಾಹನದಲ್ಲಿ ತೆರಳುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಕೊರೊನಾ  ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೂ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ತಲಪಾಡಿ ಗಡಿಯಲ್ಲಿ ಇದುವರೆಗೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆಯ ವತಿಯಿಂದ ನಡೆಸಲಾಗುತ್ತಿದ್ದ ಆರ್‌.ಟಿ.ಪಿ.ಸಿ.ಆರ್. ಪರೀಕ್ಷಾ ಕೇಂದ್ರವನ್ನು ಸೋಮವಾರ ತೆರವುಗೊಳಿಸಲಾಗಿದೆ. ಇದೀಗ ರಾಷ್ಟ್ರೀಯ ಹೆದ್ದಾರಿಯ ಮದ್ಯದಲ್ಲಿ ನಿರ್ಮಿಸಲಾಗಿದೆ.

ಇನ್ನು ಮಂಗಳೂರು ಕಡೆಯಿಂದ ತಲಪಾಡಿಗೆ ಬರುವ ಖಾಸಗಿ ಬಸ್‌ಗಳು ಟೋಲ್‌ಗೇಟ್‌ ವರೆಗೆ ಮಾತ್ರ ಬರಲು ಅವಕಾಶವಿದ್ದು, ಅಲ್ಲಿಂದ ಪ್ರಯಾಣಿಕರು ಇಳಿದು  100 ಮೀಟರ್ ದೂರ ಕಾಲ್ನಡಿಗೆಯಲ್ಲಿ ಮೇಲಿನ ಕೇರಳ ತಲಪಾಡಿಯ ಬಸ್ ತಂಗುದಾಣಕ್ಕೆ ನಡಕೊಂಡೆ ಬರಬೇಕಾಗಿದೆ. ಅಲ್ಲಿರುವ ಕಾಸರಗೋಡು ಕಡೆಗೆ ಬರುವ ಬಸ್ಸನ್ನು ಏರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು