3:02 PM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ

26/11/2023, 15:12

ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ನಡೆಯಲಿದೆ. ಸರ್ವಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕ ಆಯೋಜಿಸಿದೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಅಂತರ್ ಧರ್ಮೀಯ ಆಯೋಗ ಸಂಚಾಲಕ ಫೆಲಿಕ್ಸ್ ಮೊರಾಸ್ ಹೇಳಿದರು.

ಸ್ಪರ್ಧೆಯ ನಿಯಮಗಳು:
ವಾಲಿಬಾಲ್ ತಂಡದಲ್ಲಿ ೯ ಕ್ರೀಡಾಳುಗಳಿದ್ದು, ೬ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ತ್ರೋಬಾಲ್ ತಂಡದಲ್ಲಿ ೧೦ ಕ್ರೀಡಾಳುಗಳಿದ್ದು, ೭ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ವಯಸ್ಸಿನ ಮಿತಿಯಿಲ್ಲ.
ತಂಡದಲ್ಲಿ ೪ ಕ್ರೀಡಾಳುಗಳು ಕ್ರೈಸ್ತೇತರಿರಬೇಕು ಮತ್ತು ಆಟದಲ್ಲಿ ಕಡ್ಡಾಯವಾಗಿ ಕನಿಷ್ಠ ೨ ಕ್ರೀಡಾಳುಗಳಿರಬೇಕು.
ಈ ಪಂದ್ಯಾಟವು ಸಿಟಿ ಮತ್ತು ಎಪಿಸ್ಕೋಪಲ್ ಸಿಟಿ ಕ್ಷೇತ್ರಗಳ ಚರ್ಚುಗಳಿಗೆ ಸೀಮಿತವಾಗಿದ್ದು, ಒಂದು ಚರ್ಚಿನಿಂದ ಒಂದಕ್ಕಿಂತ ಹೆಚ್ಚು ಪಂಗಡಗಳು ಭಾಗವಹಿಸಬಹುದು.
ಪ್ರಥಮ ಮತ್ತು ದ್ವಿತೀಯ ಬಹುಮಾನದೊಂದಿಗೆ ಟ್ರೋಫಿಯನ್ನು ನೀಡಲಾಗುವುದು.
ಭಾಗವಹಿಸುವ ಪ್ರತಿಯೊಂದು ಪಂಗಡಗಳಿಗೆ ಸಂಭಾವನೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಸ್ಪರ್ಧೆಯ ಸಂಚಾಲಕರಾದ ಫೆಲಿಕ್ಸ್ ಮೊರಾಸ್ : ೯೪೪೮೪೭೬೫೪೬ ಅಥವಾ
ಅಂತರ್ ಧರ್ಮೀಯ ಸಂವಾದ ಆಯೋಗದ ಕಾರ್ಯದರ್ಶಿ ರಾಜೇಶ್ ಮಿಸ್ಕಿತ್: ೯೪೪೮೪೨೮೧೧೩ ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ
ರೋಶನ್ ಪತ್ರಾವೊ, (ಕಥೊಲಿಕ್ ಸಭಾ ಅಧ್ಯಕ್ಷರು, ಆಂಜೆಲೊರ್ ಘಟಕ),
ವಂದನೀಯ ವಿಲ್ಯಮ್ ಮಿನೇಜಸ್, (ಧರ್ಮಗುರುಗಳು, ಆಂಜೆಲೊರ್ ಚರ್ಚ್),
ರೊಯ್ ಕ್ಯಾಸ್ಟಲಿನೊ, (ಸಂಚಾಲಕರು, ಅಂತರ್ ಧರ್ಮೀಯ ಆಯೋಗ, ಮಂಗಳೂರು ಧರ್ಮಪ್ರಾಂತ್ಯ.)
ರಾಜೇಶ್ ಮಿಸ್ಕಿತ್, (ಅಂತರ್ ಧರ್ಮೀಯ ಆಯೋಗ ಕಾರ್ಯದರ್ಶಿ) ಹಾಗೂ
ಲೊಲಿನಾ ಡಿಸೋಜಾ, (ಪಾಲನಾ ಮಂಡಳಿ ಕಾರ್ಯದರ್ಶಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು