3:01 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ

26/11/2023, 15:12

ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ನಡೆಯಲಿದೆ. ಸರ್ವಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕ ಆಯೋಜಿಸಿದೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಅಂತರ್ ಧರ್ಮೀಯ ಆಯೋಗ ಸಂಚಾಲಕ ಫೆಲಿಕ್ಸ್ ಮೊರಾಸ್ ಹೇಳಿದರು.

ಸ್ಪರ್ಧೆಯ ನಿಯಮಗಳು:
ವಾಲಿಬಾಲ್ ತಂಡದಲ್ಲಿ ೯ ಕ್ರೀಡಾಳುಗಳಿದ್ದು, ೬ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ತ್ರೋಬಾಲ್ ತಂಡದಲ್ಲಿ ೧೦ ಕ್ರೀಡಾಳುಗಳಿದ್ದು, ೭ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ವಯಸ್ಸಿನ ಮಿತಿಯಿಲ್ಲ.
ತಂಡದಲ್ಲಿ ೪ ಕ್ರೀಡಾಳುಗಳು ಕ್ರೈಸ್ತೇತರಿರಬೇಕು ಮತ್ತು ಆಟದಲ್ಲಿ ಕಡ್ಡಾಯವಾಗಿ ಕನಿಷ್ಠ ೨ ಕ್ರೀಡಾಳುಗಳಿರಬೇಕು.
ಈ ಪಂದ್ಯಾಟವು ಸಿಟಿ ಮತ್ತು ಎಪಿಸ್ಕೋಪಲ್ ಸಿಟಿ ಕ್ಷೇತ್ರಗಳ ಚರ್ಚುಗಳಿಗೆ ಸೀಮಿತವಾಗಿದ್ದು, ಒಂದು ಚರ್ಚಿನಿಂದ ಒಂದಕ್ಕಿಂತ ಹೆಚ್ಚು ಪಂಗಡಗಳು ಭಾಗವಹಿಸಬಹುದು.
ಪ್ರಥಮ ಮತ್ತು ದ್ವಿತೀಯ ಬಹುಮಾನದೊಂದಿಗೆ ಟ್ರೋಫಿಯನ್ನು ನೀಡಲಾಗುವುದು.
ಭಾಗವಹಿಸುವ ಪ್ರತಿಯೊಂದು ಪಂಗಡಗಳಿಗೆ ಸಂಭಾವನೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಸ್ಪರ್ಧೆಯ ಸಂಚಾಲಕರಾದ ಫೆಲಿಕ್ಸ್ ಮೊರಾಸ್ : ೯೪೪೮೪೭೬೫೪೬ ಅಥವಾ
ಅಂತರ್ ಧರ್ಮೀಯ ಸಂವಾದ ಆಯೋಗದ ಕಾರ್ಯದರ್ಶಿ ರಾಜೇಶ್ ಮಿಸ್ಕಿತ್: ೯೪೪೮೪೨೮೧೧೩ ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ
ರೋಶನ್ ಪತ್ರಾವೊ, (ಕಥೊಲಿಕ್ ಸಭಾ ಅಧ್ಯಕ್ಷರು, ಆಂಜೆಲೊರ್ ಘಟಕ),
ವಂದನೀಯ ವಿಲ್ಯಮ್ ಮಿನೇಜಸ್, (ಧರ್ಮಗುರುಗಳು, ಆಂಜೆಲೊರ್ ಚರ್ಚ್),
ರೊಯ್ ಕ್ಯಾಸ್ಟಲಿನೊ, (ಸಂಚಾಲಕರು, ಅಂತರ್ ಧರ್ಮೀಯ ಆಯೋಗ, ಮಂಗಳೂರು ಧರ್ಮಪ್ರಾಂತ್ಯ.)
ರಾಜೇಶ್ ಮಿಸ್ಕಿತ್, (ಅಂತರ್ ಧರ್ಮೀಯ ಆಯೋಗ ಕಾರ್ಯದರ್ಶಿ) ಹಾಗೂ
ಲೊಲಿನಾ ಡಿಸೋಜಾ, (ಪಾಲನಾ ಮಂಡಳಿ ಕಾರ್ಯದರ್ಶಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು