9:05 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ

26/11/2023, 15:12

ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ನಡೆಯಲಿದೆ. ಸರ್ವಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕ ಆಯೋಜಿಸಿದೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಅಂತರ್ ಧರ್ಮೀಯ ಆಯೋಗ ಸಂಚಾಲಕ ಫೆಲಿಕ್ಸ್ ಮೊರಾಸ್ ಹೇಳಿದರು.

ಸ್ಪರ್ಧೆಯ ನಿಯಮಗಳು:
ವಾಲಿಬಾಲ್ ತಂಡದಲ್ಲಿ ೯ ಕ್ರೀಡಾಳುಗಳಿದ್ದು, ೬ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ತ್ರೋಬಾಲ್ ತಂಡದಲ್ಲಿ ೧೦ ಕ್ರೀಡಾಳುಗಳಿದ್ದು, ೭ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ವಯಸ್ಸಿನ ಮಿತಿಯಿಲ್ಲ.
ತಂಡದಲ್ಲಿ ೪ ಕ್ರೀಡಾಳುಗಳು ಕ್ರೈಸ್ತೇತರಿರಬೇಕು ಮತ್ತು ಆಟದಲ್ಲಿ ಕಡ್ಡಾಯವಾಗಿ ಕನಿಷ್ಠ ೨ ಕ್ರೀಡಾಳುಗಳಿರಬೇಕು.
ಈ ಪಂದ್ಯಾಟವು ಸಿಟಿ ಮತ್ತು ಎಪಿಸ್ಕೋಪಲ್ ಸಿಟಿ ಕ್ಷೇತ್ರಗಳ ಚರ್ಚುಗಳಿಗೆ ಸೀಮಿತವಾಗಿದ್ದು, ಒಂದು ಚರ್ಚಿನಿಂದ ಒಂದಕ್ಕಿಂತ ಹೆಚ್ಚು ಪಂಗಡಗಳು ಭಾಗವಹಿಸಬಹುದು.
ಪ್ರಥಮ ಮತ್ತು ದ್ವಿತೀಯ ಬಹುಮಾನದೊಂದಿಗೆ ಟ್ರೋಫಿಯನ್ನು ನೀಡಲಾಗುವುದು.
ಭಾಗವಹಿಸುವ ಪ್ರತಿಯೊಂದು ಪಂಗಡಗಳಿಗೆ ಸಂಭಾವನೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಸ್ಪರ್ಧೆಯ ಸಂಚಾಲಕರಾದ ಫೆಲಿಕ್ಸ್ ಮೊರಾಸ್ : ೯೪೪೮೪೭೬೫೪೬ ಅಥವಾ
ಅಂತರ್ ಧರ್ಮೀಯ ಸಂವಾದ ಆಯೋಗದ ಕಾರ್ಯದರ್ಶಿ ರಾಜೇಶ್ ಮಿಸ್ಕಿತ್: ೯೪೪೮೪೨೮೧೧೩ ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ
ರೋಶನ್ ಪತ್ರಾವೊ, (ಕಥೊಲಿಕ್ ಸಭಾ ಅಧ್ಯಕ್ಷರು, ಆಂಜೆಲೊರ್ ಘಟಕ),
ವಂದನೀಯ ವಿಲ್ಯಮ್ ಮಿನೇಜಸ್, (ಧರ್ಮಗುರುಗಳು, ಆಂಜೆಲೊರ್ ಚರ್ಚ್),
ರೊಯ್ ಕ್ಯಾಸ್ಟಲಿನೊ, (ಸಂಚಾಲಕರು, ಅಂತರ್ ಧರ್ಮೀಯ ಆಯೋಗ, ಮಂಗಳೂರು ಧರ್ಮಪ್ರಾಂತ್ಯ.)
ರಾಜೇಶ್ ಮಿಸ್ಕಿತ್, (ಅಂತರ್ ಧರ್ಮೀಯ ಆಯೋಗ ಕಾರ್ಯದರ್ಶಿ) ಹಾಗೂ
ಲೊಲಿನಾ ಡಿಸೋಜಾ, (ಪಾಲನಾ ಮಂಡಳಿ ಕಾರ್ಯದರ್ಶಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು