11:31 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ

26/11/2023, 15:12

ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ನಡೆಯಲಿದೆ. ಸರ್ವಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕ ಆಯೋಜಿಸಿದೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಅಂತರ್ ಧರ್ಮೀಯ ಆಯೋಗ ಸಂಚಾಲಕ ಫೆಲಿಕ್ಸ್ ಮೊರಾಸ್ ಹೇಳಿದರು.

ಸ್ಪರ್ಧೆಯ ನಿಯಮಗಳು:
ವಾಲಿಬಾಲ್ ತಂಡದಲ್ಲಿ ೯ ಕ್ರೀಡಾಳುಗಳಿದ್ದು, ೬ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ತ್ರೋಬಾಲ್ ತಂಡದಲ್ಲಿ ೧೦ ಕ್ರೀಡಾಳುಗಳಿದ್ದು, ೭ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ವಯಸ್ಸಿನ ಮಿತಿಯಿಲ್ಲ.
ತಂಡದಲ್ಲಿ ೪ ಕ್ರೀಡಾಳುಗಳು ಕ್ರೈಸ್ತೇತರಿರಬೇಕು ಮತ್ತು ಆಟದಲ್ಲಿ ಕಡ್ಡಾಯವಾಗಿ ಕನಿಷ್ಠ ೨ ಕ್ರೀಡಾಳುಗಳಿರಬೇಕು.
ಈ ಪಂದ್ಯಾಟವು ಸಿಟಿ ಮತ್ತು ಎಪಿಸ್ಕೋಪಲ್ ಸಿಟಿ ಕ್ಷೇತ್ರಗಳ ಚರ್ಚುಗಳಿಗೆ ಸೀಮಿತವಾಗಿದ್ದು, ಒಂದು ಚರ್ಚಿನಿಂದ ಒಂದಕ್ಕಿಂತ ಹೆಚ್ಚು ಪಂಗಡಗಳು ಭಾಗವಹಿಸಬಹುದು.
ಪ್ರಥಮ ಮತ್ತು ದ್ವಿತೀಯ ಬಹುಮಾನದೊಂದಿಗೆ ಟ್ರೋಫಿಯನ್ನು ನೀಡಲಾಗುವುದು.
ಭಾಗವಹಿಸುವ ಪ್ರತಿಯೊಂದು ಪಂಗಡಗಳಿಗೆ ಸಂಭಾವನೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಸ್ಪರ್ಧೆಯ ಸಂಚಾಲಕರಾದ ಫೆಲಿಕ್ಸ್ ಮೊರಾಸ್ : ೯೪೪೮೪೭೬೫೪೬ ಅಥವಾ
ಅಂತರ್ ಧರ್ಮೀಯ ಸಂವಾದ ಆಯೋಗದ ಕಾರ್ಯದರ್ಶಿ ರಾಜೇಶ್ ಮಿಸ್ಕಿತ್: ೯೪೪೮೪೨೮೧೧೩ ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ
ರೋಶನ್ ಪತ್ರಾವೊ, (ಕಥೊಲಿಕ್ ಸಭಾ ಅಧ್ಯಕ್ಷರು, ಆಂಜೆಲೊರ್ ಘಟಕ),
ವಂದನೀಯ ವಿಲ್ಯಮ್ ಮಿನೇಜಸ್, (ಧರ್ಮಗುರುಗಳು, ಆಂಜೆಲೊರ್ ಚರ್ಚ್),
ರೊಯ್ ಕ್ಯಾಸ್ಟಲಿನೊ, (ಸಂಚಾಲಕರು, ಅಂತರ್ ಧರ್ಮೀಯ ಆಯೋಗ, ಮಂಗಳೂರು ಧರ್ಮಪ್ರಾಂತ್ಯ.)
ರಾಜೇಶ್ ಮಿಸ್ಕಿತ್, (ಅಂತರ್ ಧರ್ಮೀಯ ಆಯೋಗ ಕಾರ್ಯದರ್ಶಿ) ಹಾಗೂ
ಲೊಲಿನಾ ಡಿಸೋಜಾ, (ಪಾಲನಾ ಮಂಡಳಿ ಕಾರ್ಯದರ್ಶಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು