12:01 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ

26/11/2023, 15:12

ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ನಡೆಯಲಿದೆ. ಸರ್ವಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕ ಆಯೋಜಿಸಿದೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಅಂತರ್ ಧರ್ಮೀಯ ಆಯೋಗ ಸಂಚಾಲಕ ಫೆಲಿಕ್ಸ್ ಮೊರಾಸ್ ಹೇಳಿದರು.

ಸ್ಪರ್ಧೆಯ ನಿಯಮಗಳು:
ವಾಲಿಬಾಲ್ ತಂಡದಲ್ಲಿ ೯ ಕ್ರೀಡಾಳುಗಳಿದ್ದು, ೬ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ತ್ರೋಬಾಲ್ ತಂಡದಲ್ಲಿ ೧೦ ಕ್ರೀಡಾಳುಗಳಿದ್ದು, ೭ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ವಯಸ್ಸಿನ ಮಿತಿಯಿಲ್ಲ.
ತಂಡದಲ್ಲಿ ೪ ಕ್ರೀಡಾಳುಗಳು ಕ್ರೈಸ್ತೇತರಿರಬೇಕು ಮತ್ತು ಆಟದಲ್ಲಿ ಕಡ್ಡಾಯವಾಗಿ ಕನಿಷ್ಠ ೨ ಕ್ರೀಡಾಳುಗಳಿರಬೇಕು.
ಈ ಪಂದ್ಯಾಟವು ಸಿಟಿ ಮತ್ತು ಎಪಿಸ್ಕೋಪಲ್ ಸಿಟಿ ಕ್ಷೇತ್ರಗಳ ಚರ್ಚುಗಳಿಗೆ ಸೀಮಿತವಾಗಿದ್ದು, ಒಂದು ಚರ್ಚಿನಿಂದ ಒಂದಕ್ಕಿಂತ ಹೆಚ್ಚು ಪಂಗಡಗಳು ಭಾಗವಹಿಸಬಹುದು.
ಪ್ರಥಮ ಮತ್ತು ದ್ವಿತೀಯ ಬಹುಮಾನದೊಂದಿಗೆ ಟ್ರೋಫಿಯನ್ನು ನೀಡಲಾಗುವುದು.
ಭಾಗವಹಿಸುವ ಪ್ರತಿಯೊಂದು ಪಂಗಡಗಳಿಗೆ ಸಂಭಾವನೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಸ್ಪರ್ಧೆಯ ಸಂಚಾಲಕರಾದ ಫೆಲಿಕ್ಸ್ ಮೊರಾಸ್ : ೯೪೪೮೪೭೬೫೪೬ ಅಥವಾ
ಅಂತರ್ ಧರ್ಮೀಯ ಸಂವಾದ ಆಯೋಗದ ಕಾರ್ಯದರ್ಶಿ ರಾಜೇಶ್ ಮಿಸ್ಕಿತ್: ೯೪೪೮೪೨೮೧೧೩ ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ
ರೋಶನ್ ಪತ್ರಾವೊ, (ಕಥೊಲಿಕ್ ಸಭಾ ಅಧ್ಯಕ್ಷರು, ಆಂಜೆಲೊರ್ ಘಟಕ),
ವಂದನೀಯ ವಿಲ್ಯಮ್ ಮಿನೇಜಸ್, (ಧರ್ಮಗುರುಗಳು, ಆಂಜೆಲೊರ್ ಚರ್ಚ್),
ರೊಯ್ ಕ್ಯಾಸ್ಟಲಿನೊ, (ಸಂಚಾಲಕರು, ಅಂತರ್ ಧರ್ಮೀಯ ಆಯೋಗ, ಮಂಗಳೂರು ಧರ್ಮಪ್ರಾಂತ್ಯ.)
ರಾಜೇಶ್ ಮಿಸ್ಕಿತ್, (ಅಂತರ್ ಧರ್ಮೀಯ ಆಯೋಗ ಕಾರ್ಯದರ್ಶಿ) ಹಾಗೂ
ಲೊಲಿನಾ ಡಿಸೋಜಾ, (ಪಾಲನಾ ಮಂಡಳಿ ಕಾರ್ಯದರ್ಶಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು