1:14 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ

17/05/2021, 20:06

ಹಳೆಯಂಗಡಿ(reporterkarnataka news);

ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ.

2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ಈ ಸ್ಥಳದಲ್ಲಿ ರಸ್ತೆ ತಡೆಗೋಡೆ ಬೇರೆ ಬೇರೆ ಕಡೆಗಳಲ್ಲಿ ಹಲವು ಬಾರಿ ಕುಸಿದಿದೆ. ಪ್ರಸಕ್ತ ಕುಸಿದಿರುವ ತಡೆಗೋಡೆ ಕಳೆದ ವರ್ಷವೇ ಬಿರುಕುಬಿಟ್ಟಿದ್ದು, ಇತ್ತೀಚಿನ ದಿನಗಳಲ್ಲಿ ಬಿರುಕು ಹೆಚ್ಚುತ್ತಾ ಹೋಗಿತ್ತು. ಕೊನೆಗೆ ಮೊನ್ನೆಯ ‘ತೌಕ್ತೆ’ ಚಂಡಮಾರುತದ ನೀರಿನ ಪ್ರವಾಹ ಮತ್ತು ಅಬ್ಬರದ ಅಲೆಗಳ ಆಘಾತಕ್ಕೆ ಕುಸಿದು ಹೋಗಿದೆ.

ಈ ರಸ್ತೆಯು ಕದಿಕೆ-ಹೊಯ್ಗೆಗುಡ್ಡೆ ಪ್ರದೇಶದ ಜೀವನಾಡಿಯಾಗಿದ್ದು, ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈಗಾಗಲೇ ಮಳೆಗಾಲ ಆರಂಭವಾಗಿದೆ. ರಸ್ತೆಯು ಮಳೆಗಾಲದಲ್ಲಿ ನಂದಿನಿ ನದಿಯ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮುನ್ನ ತಕ್ಷಣ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಹೊಯ್ಗೆಗುಡ್ಡೆ, ಕದಿಕೆ, ಚಿತ್ರಾಪು, ಸಸಿಹಿತ್ಲು, ಹಳೆಯಂಗಡಿ, ಪಡುಪಣಂಬೂರಿನ ಜನರು ಮೀನುಗಾರಿಕಾ ಇಲಾಖೆಯ ಎಂಜಿನಿಯರ್ ಗಳನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು