11:28 AM Saturday14 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ

17/05/2021, 20:06

ಹಳೆಯಂಗಡಿ(reporterkarnataka news);

ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ.

2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ಈ ಸ್ಥಳದಲ್ಲಿ ರಸ್ತೆ ತಡೆಗೋಡೆ ಬೇರೆ ಬೇರೆ ಕಡೆಗಳಲ್ಲಿ ಹಲವು ಬಾರಿ ಕುಸಿದಿದೆ. ಪ್ರಸಕ್ತ ಕುಸಿದಿರುವ ತಡೆಗೋಡೆ ಕಳೆದ ವರ್ಷವೇ ಬಿರುಕುಬಿಟ್ಟಿದ್ದು, ಇತ್ತೀಚಿನ ದಿನಗಳಲ್ಲಿ ಬಿರುಕು ಹೆಚ್ಚುತ್ತಾ ಹೋಗಿತ್ತು. ಕೊನೆಗೆ ಮೊನ್ನೆಯ ‘ತೌಕ್ತೆ’ ಚಂಡಮಾರುತದ ನೀರಿನ ಪ್ರವಾಹ ಮತ್ತು ಅಬ್ಬರದ ಅಲೆಗಳ ಆಘಾತಕ್ಕೆ ಕುಸಿದು ಹೋಗಿದೆ.

ಈ ರಸ್ತೆಯು ಕದಿಕೆ-ಹೊಯ್ಗೆಗುಡ್ಡೆ ಪ್ರದೇಶದ ಜೀವನಾಡಿಯಾಗಿದ್ದು, ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಈಗಾಗಲೇ ಮಳೆಗಾಲ ಆರಂಭವಾಗಿದೆ. ರಸ್ತೆಯು ಮಳೆಗಾಲದಲ್ಲಿ ನಂದಿನಿ ನದಿಯ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮುನ್ನ ತಕ್ಷಣ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಹೊಯ್ಗೆಗುಡ್ಡೆ, ಕದಿಕೆ, ಚಿತ್ರಾಪು, ಸಸಿಹಿತ್ಲು, ಹಳೆಯಂಗಡಿ, ಪಡುಪಣಂಬೂರಿನ ಜನರು ಮೀನುಗಾರಿಕಾ ಇಲಾಖೆಯ ಎಂಜಿನಿಯರ್ ಗಳನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು