4:01 PM Thursday21 - May 2026
ಬ್ರೇಕಿಂಗ್ ನ್ಯೂಸ್
ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ…

ಇತ್ತೀಚಿನ ಸುದ್ದಿ

ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ?

27/11/2023, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.
ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ನರಹಂತಕ ಹುಲಿಯನ್ನು ಇಂದು ಸಂಜೆ ಅಥವಾ ನಾಳೆ ಒಳಗಾಗಿ ಸೆರೆ ಹಿಡಿಯುತ್ತಾರೆ. ಈಗಾಗಲೇ ನೂರು ಜನ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 50ಕ್ಕೂ ಹೆಚ್ಚು ಕ್ಯಾಮರಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಹುಲಿಯ ಚಲನ ವಲನಗಳನ್ನು ಸೆರೆ ಹಿಡಿದು ಪತ್ತೆ ಹಚ್ಚಲಾಗಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರ ದೆಹಲಿಯಿಂದ ಈಗಾಗಲೇ ಹುಲಿ ಸೆರೆಗೆ ಪತ್ರ ರವಾನೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿ ನರಭಕ್ಷಕ ಹುಲಿ ಸರೆಗೆ ಮುಂದಾಗಿದ್ದಾರೆ ಎಂದರು.
ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ರೈತರು ಮಹಿಳೆಯರು ಆತಂಕ ಪಡುವುದು ಬೇಡ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಯಾರು ಭಯಪಡುವುದು ಬೇಡ. ಹೆಡಿಯಾಲ ಮತ್ತು ಓಂಕಾರ ಅರಣ್ಯ ವಲಯದಲ್ಲಿ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸುತ್ತಿಲ್ಲ.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ.
ವಿಧಾನಸೌಧದ ಅಧಿವೇಶನದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಮತ್ತು ಲೋಪದ ಬಗ್ಗೆ ಚರ್ಚಿಸಿ
ನಿರ್ಲಕ್ಷ್ಯತನದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ. ಈಗಾಗಲೇ ಹೆಡಿಯಾಲ ಮತ್ತು ಓಂಕಾರ ಅರಣ್ಯ ಪ್ರದೇಶದ ಅಭಿವೃದ್ಧಿಯ ಹೆಸರಿನಲ್ಲಿ ಲೋಪ ದೋಷಗಳು ನಡೆದಿದ್ದು ಅದರ ತನಿಖೆಗೂ ಮುಂದಾಗುತ್ತೇವೆ
ಎಂದು ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು