3:59 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನೆರವೇರಿದ ಶಿವ ದೀಪೋತ್ಸವ: ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಪೂಜೆ

27/11/2023, 20:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ನಡೆಯಲಿರುವ ಚಿಕ್ಕಜಾತ್ರ ಮಹೋತ್ಸವದ ಅಂಗವಾಗಿ 6ನೇ ದಿನವಾದ ಭಾನುವಾರ ಸಂಜೆ ಕಾರ್ತಿಕ ಮಾಸ ಹಾಗೂ ಹುಣ್ಣಿಮೆ ದಿನದಂದು ಶ್ರೀ ಶಿವ ದೀಪೋತ್ಸವವನ್ನು ಹಲವಾರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಶಿವ ದೀಪೋತ್ಸವಕ್ಕಾಗಿ ದೇವಾಲಯದ ಮುಂದೆ ಸುಮಾರು 20 ಅಡಿಗೂ ಉದ್ದದ ದೀಪ ಸ್ತಂಭವನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಸಲ್ಲಿಸಲಾಯಿತು.


ಅಲಂಕೃತಗೊಂಡ ಶ್ರೀ ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ಪ್ರಾಂಗಣದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ದೇವಾಲಯದ ಸುತ್ತ ಮೆರವಣಿಗೆಯಲ್ಲಿ ಬಂದ ಉತ್ಸವ ಮೂರ್ತಿಗಳನ್ನು ದೀಪ ಸ್ತಂಭದ ಮುಂಭಾಗದ ಶಿವ ಮಂಟಪದಲ್ಲಿ ಕೂರಿಸಲಾಯಿತು. ಬಳಿಕ ದೀಪಸ್ತಂಭದಲ್ಲಿ ಅಳವಡಿಸಲಾಗಿದ್ದ ದೀಪ ಹಾಗೂ ಎಣ್ಣೆ ಹಚ್ಚಿದ್ದ ನೂರಾರು ಪೆಂಜುಗಳನ್ನು ಹೊತ್ತಿ ಉರಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು.
ಶಿವ ದೀಪೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ದೀಪೋತ್ಸವವನ್ನು ಕಣ್ತುಂಬಿ ಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಅಲ್ಲದೆ ಹಲವಾರು ಭಕ್ತರು ದೇವಾಲಯದ ಮುಂಭಾಗ ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ಭಕ್ತಿಯ ಪರಾಕಾಷ್ಠೆ ಯಲ್ಲಿ ಮಿಂದೆದ್ದರು.
ಚಿಕ್ಕ ಜಾತ್ರೆ ಪ್ರಯುಕ್ತ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ಅರ್ಚಕ ವೃಂದ ಹಾಗೂ ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದೇವಾಲಯದ ಅರ್ಚಕರು ಪಾರುಪತ್ತೆಗಾರರು ಆದ Krwa ಶಿವಶಂಕರ ದೀಕ್ಷಿತ್ ಮಾತನಾಡಿ, ಶಿವ ದೀಪೋತ್ಸವದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು