7:18 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಸಮೀಪದ ಕಕ್ಕಿಂಜೆ ಬಳಿ ಕಾರಿನ ಮೇಲೆ ಕಾಡಾನೆ ದಾಳಿ: ಕಾರನ್ನೊಮ್ಮೆ ಮೇಲಕ್ಕೆತ್ತಿದ ಸಲಗ; ಭಯಭೀತರಾದ ಗ್ರಾಮಸ್ಥರು

27/11/2023, 22:00

ಬೆಳ್ತಂಗಡಿ(reporterkarnataka.com): ಪಶ್ಚಿಮಘಟ್ಟ ತಪ್ಪಲು ಪ್ರದೇಶದಲ್ಲಿ ಕಾಡಾನೆ ಹಾವಳಿ ಮತ್ತೆ ಶುರುವಾಗಿದೆ. ಕಕ್ಕಿಂಜೆ ಸಮೀಪ ಕಾಡಾನೆಯೊಂದು ಕಾರೊಂದರ ಮೇಲೆ ದಾಳಿ ನಡೆಸಿ, ದಾಂಧಲೆ ನಡೆಸಿದೆ.
ಕಕ್ಕಿಂಜೆಯ ಬಯಲುಬಸ್ತಿಯಲ್ಲಿ ಸೋಮವಾರ ಕತ್ತಲೆ ಆವರಿಸುತ್ತಿದ್ದಂತೆ ಕಾಡಾನೆಯ ಆಗಮನವಾಗಿದೆ. ಆನೆ ಬರುವುದನ್ನು ಕಂಡು ಚಾಲಕರು ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ಆದರೆ ನೇರವಾಗಿ ಕಾರಿನತ್ತ ಆಗಮಿಸಿದ ಕಾಡಾನೆ ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆನೆ ಬಳಿಕ ಜಾಗ ಖಾಲಿ ಮಾಡಿ ಕಾಡಿನತ್ತ ತೆರಳಿದೆ. ಈ ಘಟನೆಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಇತ್ತೀಚೆಗೆ ಕಡಬ ಸಮೀಪದ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಹಿಂದೆ ಸುಳ್ಯ ಸಮೀಪದ ಮಂಡೆಕೋಲು ಸುತ್ತ ಮುತ್ತಲಿನ ಪ್ರದೇಶದಲ್ಲಿ ಕಾಡಾನೆ ಉಪಟಳ ತೀವ್ರವಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಲವು ಪ್ರದೇಶಗಳು ಈಗಾಗಲೇ ಕಾಡಾನೆ ಹಾವಳಿಗೆ ತುತ್ತಾಗಿದೆ. 2 ತಿಂಗಳ ಅವಧಿಯಲ್ಲಿ ಇಲ್ಲಿ ಸಲಗ ದಾಳಿಗೆ ಮೂವರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು