3:00 AM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ

28/11/2023, 19:39

ಶಶಿ ಬೆತ್ತದಕೊಳಲು ಕೊಪ್ಪ

info.reporterarnataka@gmail.com

ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ “ಗೆಳೆಯರ ಬಳಗ” ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು.
ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ಕಾಶ್ಮೀರ ಅಂತಾನೆ ಹೇಳ್ತಾರೆ ಪ್ರವಾಸಿಗರು. ಭೂಲೋಕದ ಸ್ವರ್ಗ ಅಂತಾನೂ ಕರೆಸಿಕೊಳ್ಳುವ ಬಸರೀಕಟ್ಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಅಂದ್ರೆ ಕೇಳ್ಬೇಕ?
ಅಬ್ಬಬ್ಬಾ ನೋಡೋಕೆ ಎರಡು ಕಣ್ಣುಗಳು ಸಾಲದಾಯ್ತು.
ಕನ್ನಡ ಮನಸ್ಸುಗಳನ್ನು ಒಂದೆಡೆ ನೋಡಿ ಕನ್ನಡಾಂಬೆ ಕೂಡ ಒಮ್ಮೆ ಖುಷಿ ಪಟ್ಟಂತೆ ಅನ್ನಿಸಿ ಬಿಡ್ತು..


ಬೆಳಗ್ಗೆ ನಡೆದ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ತಾಯಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ವಿವಿಧ ವೇಷಗಳ ನೃತ್ಯವೂ ಇತ್ತು. ಈ ಭಾರೀಯ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರವಂತು ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ನಂತರ ಸಭಾ ಕಾರ್ಯಕ್ರಮವೂ ಪ್ರಧಾನ ಸಂಚಾಲಕ ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಊರಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಭಾರೀ ಊರಿಗೆ ಕೀರ್ತಿ ತಂದ ಮಕ್ಕಳನ್ನು ವಿಶೇಷವಾಗಿ ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು..
ಬಸರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಸ್ಸಾಂ ಮೂಲದ ವಿದ್ಯಾರ್ಥಿನಿ ಕನ್ನಡ ಬಾವುಟ ಮತ್ತು ದೇಶದ ಬಾವುಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು.

ಇತ್ತೀಚಿನ ಸುದ್ದಿ

ಜಾಹೀರಾತು