7:21 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ

28/11/2023, 19:39

ಶಶಿ ಬೆತ್ತದಕೊಳಲು ಕೊಪ್ಪ

info.reporterarnataka@gmail.com

ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ “ಗೆಳೆಯರ ಬಳಗ” ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು.
ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ಕಾಶ್ಮೀರ ಅಂತಾನೆ ಹೇಳ್ತಾರೆ ಪ್ರವಾಸಿಗರು. ಭೂಲೋಕದ ಸ್ವರ್ಗ ಅಂತಾನೂ ಕರೆಸಿಕೊಳ್ಳುವ ಬಸರೀಕಟ್ಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಅಂದ್ರೆ ಕೇಳ್ಬೇಕ?
ಅಬ್ಬಬ್ಬಾ ನೋಡೋಕೆ ಎರಡು ಕಣ್ಣುಗಳು ಸಾಲದಾಯ್ತು.
ಕನ್ನಡ ಮನಸ್ಸುಗಳನ್ನು ಒಂದೆಡೆ ನೋಡಿ ಕನ್ನಡಾಂಬೆ ಕೂಡ ಒಮ್ಮೆ ಖುಷಿ ಪಟ್ಟಂತೆ ಅನ್ನಿಸಿ ಬಿಡ್ತು..


ಬೆಳಗ್ಗೆ ನಡೆದ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ತಾಯಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ವಿವಿಧ ವೇಷಗಳ ನೃತ್ಯವೂ ಇತ್ತು. ಈ ಭಾರೀಯ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರವಂತು ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ನಂತರ ಸಭಾ ಕಾರ್ಯಕ್ರಮವೂ ಪ್ರಧಾನ ಸಂಚಾಲಕ ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಊರಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಭಾರೀ ಊರಿಗೆ ಕೀರ್ತಿ ತಂದ ಮಕ್ಕಳನ್ನು ವಿಶೇಷವಾಗಿ ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು..
ಬಸರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಸ್ಸಾಂ ಮೂಲದ ವಿದ್ಯಾರ್ಥಿನಿ ಕನ್ನಡ ಬಾವುಟ ಮತ್ತು ದೇಶದ ಬಾವುಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು.

ಇತ್ತೀಚಿನ ಸುದ್ದಿ

ಜಾಹೀರಾತು