4:36 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ

28/11/2023, 19:39

ಶಶಿ ಬೆತ್ತದಕೊಳಲು ಕೊಪ್ಪ

info.reporterarnataka@gmail.com

ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ “ಗೆಳೆಯರ ಬಳಗ” ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು.
ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ಕಾಶ್ಮೀರ ಅಂತಾನೆ ಹೇಳ್ತಾರೆ ಪ್ರವಾಸಿಗರು. ಭೂಲೋಕದ ಸ್ವರ್ಗ ಅಂತಾನೂ ಕರೆಸಿಕೊಳ್ಳುವ ಬಸರೀಕಟ್ಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಅಂದ್ರೆ ಕೇಳ್ಬೇಕ?
ಅಬ್ಬಬ್ಬಾ ನೋಡೋಕೆ ಎರಡು ಕಣ್ಣುಗಳು ಸಾಲದಾಯ್ತು.
ಕನ್ನಡ ಮನಸ್ಸುಗಳನ್ನು ಒಂದೆಡೆ ನೋಡಿ ಕನ್ನಡಾಂಬೆ ಕೂಡ ಒಮ್ಮೆ ಖುಷಿ ಪಟ್ಟಂತೆ ಅನ್ನಿಸಿ ಬಿಡ್ತು..


ಬೆಳಗ್ಗೆ ನಡೆದ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ತಾಯಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ವಿವಿಧ ವೇಷಗಳ ನೃತ್ಯವೂ ಇತ್ತು. ಈ ಭಾರೀಯ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರವಂತು ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ನಂತರ ಸಭಾ ಕಾರ್ಯಕ್ರಮವೂ ಪ್ರಧಾನ ಸಂಚಾಲಕ ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಊರಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಭಾರೀ ಊರಿಗೆ ಕೀರ್ತಿ ತಂದ ಮಕ್ಕಳನ್ನು ವಿಶೇಷವಾಗಿ ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು..
ಬಸರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಸ್ಸಾಂ ಮೂಲದ ವಿದ್ಯಾರ್ಥಿನಿ ಕನ್ನಡ ಬಾವುಟ ಮತ್ತು ದೇಶದ ಬಾವುಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು.

ಇತ್ತೀಚಿನ ಸುದ್ದಿ

ಜಾಹೀರಾತು