3:18 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ

28/11/2023, 19:39

ಶಶಿ ಬೆತ್ತದಕೊಳಲು ಕೊಪ್ಪ

info.reporterarnataka@gmail.com

ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ “ಗೆಳೆಯರ ಬಳಗ” ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು.
ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ಕಾಶ್ಮೀರ ಅಂತಾನೆ ಹೇಳ್ತಾರೆ ಪ್ರವಾಸಿಗರು. ಭೂಲೋಕದ ಸ್ವರ್ಗ ಅಂತಾನೂ ಕರೆಸಿಕೊಳ್ಳುವ ಬಸರೀಕಟ್ಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಅಂದ್ರೆ ಕೇಳ್ಬೇಕ?
ಅಬ್ಬಬ್ಬಾ ನೋಡೋಕೆ ಎರಡು ಕಣ್ಣುಗಳು ಸಾಲದಾಯ್ತು.
ಕನ್ನಡ ಮನಸ್ಸುಗಳನ್ನು ಒಂದೆಡೆ ನೋಡಿ ಕನ್ನಡಾಂಬೆ ಕೂಡ ಒಮ್ಮೆ ಖುಷಿ ಪಟ್ಟಂತೆ ಅನ್ನಿಸಿ ಬಿಡ್ತು..


ಬೆಳಗ್ಗೆ ನಡೆದ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ತಾಯಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ವಿವಿಧ ವೇಷಗಳ ನೃತ್ಯವೂ ಇತ್ತು. ಈ ಭಾರೀಯ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರವಂತು ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ನಂತರ ಸಭಾ ಕಾರ್ಯಕ್ರಮವೂ ಪ್ರಧಾನ ಸಂಚಾಲಕ ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಊರಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಭಾರೀ ಊರಿಗೆ ಕೀರ್ತಿ ತಂದ ಮಕ್ಕಳನ್ನು ವಿಶೇಷವಾಗಿ ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು..
ಬಸರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಸ್ಸಾಂ ಮೂಲದ ವಿದ್ಯಾರ್ಥಿನಿ ಕನ್ನಡ ಬಾವುಟ ಮತ್ತು ದೇಶದ ಬಾವುಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು.

ಇತ್ತೀಚಿನ ಸುದ್ದಿ

ಜಾಹೀರಾತು