11:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು