3:23 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ನಂಜನಗೂಡು: ಹುಲಿ ಕಾಟ ಜತೆಗೆ ಚಿರತೆ ಹಾವಳಿ ಶುರು; ಜಮೀನುಗಳ ರಸ್ತೆಯಲ್ಲೇ ಚಿರತೆ ಬಿಂದಾಸ್ ಹೆಜ್ಜೆ; ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ

28/11/2023, 22:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಟ ಜತೆಗೆ ಚಿರತೆ ಹಾವಳಿ ಕೂಡ ಕಂಡು ಬಂದಿದೆ. ಇಲ್ಲಿನ ರಾಂಪುರ , ಗೌಡರ ಹುಂಡಿ ಗ್ರಾಮದ ಸುತ್ತಮುತ್ತ ಜಮೀನುಗಳಲ್ಲಿ ಚಿರತೆ ನಿರಾತಂಕವಾಗಿ ನಡೆದಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಗ್ರಾಮದ ಮುಖ್ಯರಸ್ತೆಯಿಂದ ಹಿಡಿದು ಜಮೀನಿನ ಕಾಲುದಾರಿಯಲ್ಲಿ ರಾತ್ರಿ ವೇಳೆ ಚಿರತೆ ನಡೆದು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಗೌಡರಹುಂಡಿ ಗ್ರಾಮದ ಶೃಂಗಾರ್ ಎಂಬುವರ ಜಮೀನಿನ ಬಳಿ ಕಾಣಿಸಿಕೊಂಡ ಚಿರತೆಯನ್ನು ರೈತರೊಬ್ಬರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ನಲ್ಲಿ ಸೆರೆಹಿಡಿದ ದೃಶ್ಯ ಈಗ ವೈರಲ್ ಆಗಿದೆ.


ನಂಜನಗೂಡಿನಲ್ಲಿ ಒಂದೆಡೆ ಹುಲಿ ಹಾವಳಿ ಇದ್ದರೆ ಮತ್ತೊಂದೆಡೆ ಚಿರತೆ ಹಾವಳಿ ಕಾಡುತ್ತಿದೆ. ಅರಣ್ಯಪ್ರದೇಶ ಇಲ್ಲದಿದ್ದರೂ ಗ್ರಾಮಗಳು ಹಾಗು ರೈತರ ಜಮೀನುಗಳಲ್ಲಿ ಇಂತಹ ವ್ಯಾಘ್ರಗಳು ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು