5:49 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ನಂಜನಗೂಡು: ಹುಲಿ ಕಾಟ ಜತೆಗೆ ಚಿರತೆ ಹಾವಳಿ ಶುರು; ಜಮೀನುಗಳ ರಸ್ತೆಯಲ್ಲೇ ಚಿರತೆ ಬಿಂದಾಸ್ ಹೆಜ್ಜೆ; ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ

28/11/2023, 22:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಟ ಜತೆಗೆ ಚಿರತೆ ಹಾವಳಿ ಕೂಡ ಕಂಡು ಬಂದಿದೆ. ಇಲ್ಲಿನ ರಾಂಪುರ , ಗೌಡರ ಹುಂಡಿ ಗ್ರಾಮದ ಸುತ್ತಮುತ್ತ ಜಮೀನುಗಳಲ್ಲಿ ಚಿರತೆ ನಿರಾತಂಕವಾಗಿ ನಡೆದಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಗ್ರಾಮದ ಮುಖ್ಯರಸ್ತೆಯಿಂದ ಹಿಡಿದು ಜಮೀನಿನ ಕಾಲುದಾರಿಯಲ್ಲಿ ರಾತ್ರಿ ವೇಳೆ ಚಿರತೆ ನಡೆದು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಗೌಡರಹುಂಡಿ ಗ್ರಾಮದ ಶೃಂಗಾರ್ ಎಂಬುವರ ಜಮೀನಿನ ಬಳಿ ಕಾಣಿಸಿಕೊಂಡ ಚಿರತೆಯನ್ನು ರೈತರೊಬ್ಬರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ನಲ್ಲಿ ಸೆರೆಹಿಡಿದ ದೃಶ್ಯ ಈಗ ವೈರಲ್ ಆಗಿದೆ.


ನಂಜನಗೂಡಿನಲ್ಲಿ ಒಂದೆಡೆ ಹುಲಿ ಹಾವಳಿ ಇದ್ದರೆ ಮತ್ತೊಂದೆಡೆ ಚಿರತೆ ಹಾವಳಿ ಕಾಡುತ್ತಿದೆ. ಅರಣ್ಯಪ್ರದೇಶ ಇಲ್ಲದಿದ್ದರೂ ಗ್ರಾಮಗಳು ಹಾಗು ರೈತರ ಜಮೀನುಗಳಲ್ಲಿ ಇಂತಹ ವ್ಯಾಘ್ರಗಳು ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು