4:03 PM Thursday21 - May 2026
ಬ್ರೇಕಿಂಗ್ ನ್ಯೂಸ್
ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ…

ಇತ್ತೀಚಿನ ಸುದ್ದಿ

ನಂಜನಗೂಡು: ಹುಲಿ ಕಾಟ ಜತೆಗೆ ಚಿರತೆ ಹಾವಳಿ ಶುರು; ಜಮೀನುಗಳ ರಸ್ತೆಯಲ್ಲೇ ಚಿರತೆ ಬಿಂದಾಸ್ ಹೆಜ್ಜೆ; ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ

28/11/2023, 22:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಟ ಜತೆಗೆ ಚಿರತೆ ಹಾವಳಿ ಕೂಡ ಕಂಡು ಬಂದಿದೆ. ಇಲ್ಲಿನ ರಾಂಪುರ , ಗೌಡರ ಹುಂಡಿ ಗ್ರಾಮದ ಸುತ್ತಮುತ್ತ ಜಮೀನುಗಳಲ್ಲಿ ಚಿರತೆ ನಿರಾತಂಕವಾಗಿ ನಡೆದಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಗ್ರಾಮದ ಮುಖ್ಯರಸ್ತೆಯಿಂದ ಹಿಡಿದು ಜಮೀನಿನ ಕಾಲುದಾರಿಯಲ್ಲಿ ರಾತ್ರಿ ವೇಳೆ ಚಿರತೆ ನಡೆದು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಗೌಡರಹುಂಡಿ ಗ್ರಾಮದ ಶೃಂಗಾರ್ ಎಂಬುವರ ಜಮೀನಿನ ಬಳಿ ಕಾಣಿಸಿಕೊಂಡ ಚಿರತೆಯನ್ನು ರೈತರೊಬ್ಬರು ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ನಲ್ಲಿ ಸೆರೆಹಿಡಿದ ದೃಶ್ಯ ಈಗ ವೈರಲ್ ಆಗಿದೆ.


ನಂಜನಗೂಡಿನಲ್ಲಿ ಒಂದೆಡೆ ಹುಲಿ ಹಾವಳಿ ಇದ್ದರೆ ಮತ್ತೊಂದೆಡೆ ಚಿರತೆ ಹಾವಳಿ ಕಾಡುತ್ತಿದೆ. ಅರಣ್ಯಪ್ರದೇಶ ಇಲ್ಲದಿದ್ದರೂ ಗ್ರಾಮಗಳು ಹಾಗು ರೈತರ ಜಮೀನುಗಳಲ್ಲಿ ಇಂತಹ ವ್ಯಾಘ್ರಗಳು ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು