4:45 AM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಸ್ವಾಮೀ… ನಮ್ ಪ್ರಧಾನಿ ಪ್ರಾಮಾಣಿಕರಾದ್ರೆ ಸಾಲದು: ನಮ್ಮ ಅಕಾಡೆಮಿ ಅಧ್ಯಕ್ಷರು, ಎಂಎಲ್ ಎಗಳು, ಕಾರ್ಪೊರೇಟರ್ ಗಳು ಪ್ರಾಮಾಣಿಕರಾಗಬೇಕು !

03/08/2021, 16:28

ಮಂಗಳೂರು(repoeterkarnataka.com): ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿರುವಾಗ ಈ ಭಾಷಾ ಅಕಾಡೆಮಿಗಳ ಅಧ್ಯಕ್ಷರು ಎಲ್ಲಿಗೆ ಟೂರ್ ಹೋದ್ರು ಎಂಬ ಪ್ರಶ್ನೆ ಜನರನ್ನು ಕಾಡ ತೊಡಗಿದೆ. ಯಾಕೆಂದ್ರೆ ಮೂರು ಅಕಾಡೆಮಿಗಳ ಅಧ್ಯಕ್ಷರು ಈ ಅವಧಿಯಲ್ಲಿ ಪ್ರಯಾಣ ಭತ್ತೆಯನ್ನು ಪಡೆದು ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಕೊರೊನಾ ಹಿನ್ನೆಲೆಯಲ್ಲಿ 2020ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲಿ ಲಾಕ್‌ಡೌನ್‌ ಹೇರಲಾಗಿತ್ತು. ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಸಭೆ-ಸಮಾರಂಭಗಳಿಗೆ ಅವಕಾಶ ಇರಲಿಲ್ಲ. ಜನರು ಮನೆ ಬಿಟ್ಟು ಹೊರಗೆ ಬರಬಾರದು ಎಂದು ಕರ್ಫ್ಯೂ ಹೇರಲಾಗಿತ್ತು. ಆದರೆ  ಕರಾವಳಿಯ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆ ಅಕಾಡಮಿಯ ಅಧ್ಯಕ್ಷರು ಈ ಅವಧಿಯ ಪ್ರಯಾಣ ಭತ್ತೆ ಸ್ವೀಕರಿಸಿರುವ ಅಂಶವನ್ನು ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ, ಸಾಹಿತಿ ಡಾ.ಅರವಿಂದ ಚಂದ್ರಕಾಂತ ಶ್ಯಾನಭಾಗ ಮಾಹಿತಿ ಹಕ್ಕು ಕಾಯ್ದೆಯಡಿ ಬೆಳಕಿಗೆ ತಂದಿದ್ದಾರೆ.

ಲಾಕ್‌ಡೌನ್, ಕರ್ಫ್ಯೂ ಸಂದರ್ಭದಲ್ಲಿ ಅಕಾಡಮಿಗಳಿಗೆ ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಬಿಡಿ, ಅಕಾಡೆಮಿಗಳ

ಕಚೇರಿ ತೆರೆಯಲು ಕೂಡ ಅವಕಾಶ ಇರಲಿಲ್ಲ. ವಾಹನಗಳ ಓಡಾಟಕ್ಕೂ ನಿರ್ಬಂಧ ಇತ್ತು. ಆದರೆ ನಮ್ಮ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆ ಅಕಾಡೆಮಿಗಳ ಅಧ್ಯಕ್ಷರು ಫುಲ್ ಬ್ಯುಸಿಯಾಗಿದ್ದರು. ಆದರೆ ಇವರು ಬ್ಯುಸಿ ಇದ್ದದ್ದು ತಮ್ಮ ತಮ್ಮ ಅಕಾಡೆಮಿಗಳ ಅಭಿವೃದ್ಧಿ ವಿಷಯದಲ್ಲಿ ಅಲ್ಲ. ಬದಲಿಗೆ ಮನೆಯಲ್ಲೇ ಕುಳಿತು ಪ್ರಯಾಣ ಭತ್ತೆಯನ್ನು ಪಡೆಯುವುದು ಹೇಗೆ ಎನ್ನುವ ಕುರಿತು ಬ್ಯುಸಿಯಾಗಿದ್ದರು. ಈ ಮೂರು ಅಕಾಡೆಮಿಗಳ ಅಧ್ಯಕ್ಷರು ಮನೆಯಲ್ಲೇ ಕೂತು ಸಾಹಿತ್ಯಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಲಕ್ಷಗಟ್ಟಲೆ ಮೊತ್ತದ ಪ್ರಯಾಣ ಭತ್ತೆಯನ್ನು ಪಡೆದಿದ್ದಾರೆ. ಅರ್ಥಾತ್ ಜನರ ತೆರಿಗೆಯ ಹಣವನ್ನು ದುರುಪಯೋಗ ಮಾಡಿದ್ದಾರೆ. ಇದರ ಕುರಿತು ಡಾ. ಶ್ಯಾನಬೊಗ ಅವರು ದಾಖಲೆ ಸಮೇತ ಮಾಹಿತಿ ಹೊರಗೆಡಹಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಹೆಚ್ಚಾಗಿ ವೆಬಿನಾರ್, ಫೇಸ್‌ಬುಕ್ ಲೈವ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಸಾಹಿತ್ಯ ಸಂವಾದಗಳು ನಡೆಸಲಾಗಿದೆ. ಹೀಗಿರುವಾಗ ಈ ಅಕಾಡಮಿಗಳ ಅಧ್ಯಕ್ಷರು ಎಲ್ಲೂ ಪ್ರಯಾಣಿಸದೆ ತಿಂಗಳಿಗೆ ಬರೋಬ್ಬರಿ 30 ಸಾವಿರ ರೂ.ಗಳಂತೆ ಎರಡೂವರೆ ತಿಂಗಳಿಗೆ 75 ಸಾವಿರ ರೂ. ವೆಚ್ಚವನ್ನು ತೋರಿಸಿ ವಿವಿಧ ಟ್ರಾವೆಲ್ಸ್ ಸಂಸ್ಥೆಗಳ ಹೆಸರಿನಲ್ಲಿ ಪ್ರಯಾಣ ಭತ್ತೆಯನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಡಾ. ಶ್ಯಾನಭಾಗ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ಈ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಸಿಗಬೇಕಾದರೆ ನಮ್ಮ ಪ್ರಧಾನ ಮಂತ್ರಿಯವರು ಮಾತ್ರ ಪ್ರಾಮಾಣಿಕರಾದ್ರೆ ಸಾಲದು. ನಮ್ಮ ಎಂಪಿ, ಎಂಎಲ್ ಎ, ಕಾರ್ಪೊರೇಟರ್ ಗಳು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಸರಕಾರಿ ಅಧಿಕಾರಿಗಳು ಕೂಡ ಪ್ರಾಮಾಣಿಕರಾಗಿರಬೇಕು. ಪರ್ಸಂಟೆಜ್ ಕಾಮಗಾರಿ ಮೂಲಕ ದೇಶದ ಅಭಿವೃದ್ಧಿ ಮಾಡಬಾರದು.

ಇತ್ತೀಚಿನ ಸುದ್ದಿ

ಜಾಹೀರಾತು