12:10 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು