1:18 PM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಚಿಕ್ಕೋಡಿ ಜಿಲ್ಲೆ ರಚನೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ: ಮನವಿ ಸಲ್ಲಿಕೆ

29/11/2023, 11:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿತು.
ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಈ ಭಾಗದ ಹೋರಾಟಗಾರರು ಪ್ರತಿಟನೆ, ಧರಣಿ, ಸತ್ಯಾಗ್ರಹ, ಬಂದ್ ಗಳನ್ನು ಮಾಡುತ್ತಲೇ ಬಂದಿದ್ದರೂ ಕೂಡ ಇದುವರೆಗೂ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುತ್ತಿಲ್ಲ. ಇದೀಗ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಕೆಲ ಕಾಲ ಬಸವೇಶ್ವರ ವೃತ್ತದಲ್ಲಿ ನಿಂತು ಘೋಷಣೆ ಕೂಗಿ ಮಿನಿ ವಿಧಾನಸೌಧಕ್ಕೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಇದಕ್ಕೂ ಮೊದಲು ಪ್ರತಿಭಟನಾಕಾರರನ್ನು ಉದ್ದೇಶಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜೀವ ಬಡಿಗೇರ ಮಾತನಾಡಿ, ಈ ಹಿಂದೆ ಹಲವು ಭಾರಿ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಹೋರಾಟ ಮಾಡಿ ಮನವಿ ಸಲ್ಲಿಸಲಾಗಿದೆ. ಆದ್ರೆ ಈ ಭಾಗದ ಜನಪ್ರತಿನಿಧಿಗಳು ಖ್ಯಾರೆ ಎನ್ನುತ್ತಿಲ್ಲ. ಈ ಭಾಗದ ಜನರ ತೊಂದರೆ ಹೇಳತೀರದ್ದಾಗಿದೆ. ಜಿಲ್ಲೆಯನ್ನಾಗಿ ಘೋಷಣೆ ಮಾಡದೇ ಹೋದಲ್ಲಿ ಮತ್ತೇ ಹೋರಾಟ ಸಮಿತಿಯು ಧರಣಿ, ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಮುಖಂಡ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ” ಈಗಾಗಲೇ ಬಿಜೆಪಿ, ಕಾಂಗ್ರೇಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಈ ಭಾಗದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದಾಗ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುವುದಾಗಿ ಹೇಳುತ್ತಲೇ ಬಂದಿದ್ದು, ಎರಡೂವರೆ ದಶಕಗಳಿಂದಲೂ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಹೋರಾಟ ಮಾಡುತ್ತಲೇ ಬಂದಿದ್ದು, ಈಗಲೂ ಕೂಡ ಚಿಕ್ಕೋಡಿ ಜಿಲ್ಲೆ ಘೋಷಣೆಯಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದರು.
ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಜಯ ಪಾಟೀಲ, ಸಂತೋಷ ಪೂಜೇರಿ, ಪ್ರತಾಪ ಪಾಟೀಲ, ಬಸವರಾಜ ಸಾಜನೆ, ಅಮೂಲ ನಾವಿ, ವಿಜಯ ಬ್ಯಾಳೆ, ಕುಮಾರ ಪಾಟೀಲ, ಸತ್ಯಪ್ಪ ಕಾಂಬಳೆ, ರಮೇಶ ಢಂಗೇರ, ಭೀಮು ನಾಯಕ, ಶ್ರೀಕಾಂತ ಅಸೋದೆ, ರವಿ ನಾಯ್ಕ, ರಫೀಕ ಪಠಾಣ, ಕುಮಾರ ಗುರವ, ಪರಶು ಗಾವಡೆ, ಸಚಿನ ದೊಡಮನಿ, ಕಾನಪ್ಪ ಪಾಡಕರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು