1:27 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಚಿಕ್ಕೋಡಿ ಜಿಲ್ಲೆ ರಚನೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ: ಮನವಿ ಸಲ್ಲಿಕೆ

29/11/2023, 11:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿತು.
ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಈ ಭಾಗದ ಹೋರಾಟಗಾರರು ಪ್ರತಿಟನೆ, ಧರಣಿ, ಸತ್ಯಾಗ್ರಹ, ಬಂದ್ ಗಳನ್ನು ಮಾಡುತ್ತಲೇ ಬಂದಿದ್ದರೂ ಕೂಡ ಇದುವರೆಗೂ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುತ್ತಿಲ್ಲ. ಇದೀಗ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಕೆಲ ಕಾಲ ಬಸವೇಶ್ವರ ವೃತ್ತದಲ್ಲಿ ನಿಂತು ಘೋಷಣೆ ಕೂಗಿ ಮಿನಿ ವಿಧಾನಸೌಧಕ್ಕೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಇದಕ್ಕೂ ಮೊದಲು ಪ್ರತಿಭಟನಾಕಾರರನ್ನು ಉದ್ದೇಶಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜೀವ ಬಡಿಗೇರ ಮಾತನಾಡಿ, ಈ ಹಿಂದೆ ಹಲವು ಭಾರಿ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಹೋರಾಟ ಮಾಡಿ ಮನವಿ ಸಲ್ಲಿಸಲಾಗಿದೆ. ಆದ್ರೆ ಈ ಭಾಗದ ಜನಪ್ರತಿನಿಧಿಗಳು ಖ್ಯಾರೆ ಎನ್ನುತ್ತಿಲ್ಲ. ಈ ಭಾಗದ ಜನರ ತೊಂದರೆ ಹೇಳತೀರದ್ದಾಗಿದೆ. ಜಿಲ್ಲೆಯನ್ನಾಗಿ ಘೋಷಣೆ ಮಾಡದೇ ಹೋದಲ್ಲಿ ಮತ್ತೇ ಹೋರಾಟ ಸಮಿತಿಯು ಧರಣಿ, ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಮುಖಂಡ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ” ಈಗಾಗಲೇ ಬಿಜೆಪಿ, ಕಾಂಗ್ರೇಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಈ ಭಾಗದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದಾಗ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುವುದಾಗಿ ಹೇಳುತ್ತಲೇ ಬಂದಿದ್ದು, ಎರಡೂವರೆ ದಶಕಗಳಿಂದಲೂ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಹೋರಾಟ ಮಾಡುತ್ತಲೇ ಬಂದಿದ್ದು, ಈಗಲೂ ಕೂಡ ಚಿಕ್ಕೋಡಿ ಜಿಲ್ಲೆ ಘೋಷಣೆಯಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದರು.
ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಜಯ ಪಾಟೀಲ, ಸಂತೋಷ ಪೂಜೇರಿ, ಪ್ರತಾಪ ಪಾಟೀಲ, ಬಸವರಾಜ ಸಾಜನೆ, ಅಮೂಲ ನಾವಿ, ವಿಜಯ ಬ್ಯಾಳೆ, ಕುಮಾರ ಪಾಟೀಲ, ಸತ್ಯಪ್ಪ ಕಾಂಬಳೆ, ರಮೇಶ ಢಂಗೇರ, ಭೀಮು ನಾಯಕ, ಶ್ರೀಕಾಂತ ಅಸೋದೆ, ರವಿ ನಾಯ್ಕ, ರಫೀಕ ಪಠಾಣ, ಕುಮಾರ ಗುರವ, ಪರಶು ಗಾವಡೆ, ಸಚಿನ ದೊಡಮನಿ, ಕಾನಪ್ಪ ಪಾಡಕರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು