3:02 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಚಿಕ್ಕೋಡಿ ಜಿಲ್ಲೆ ರಚನೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ: ಮನವಿ ಸಲ್ಲಿಕೆ

29/11/2023, 11:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ
info.reporterkarnataka@gmail.com
ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿತು.
ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಈ ಭಾಗದ ಹೋರಾಟಗಾರರು ಪ್ರತಿಟನೆ, ಧರಣಿ, ಸತ್ಯಾಗ್ರಹ, ಬಂದ್ ಗಳನ್ನು ಮಾಡುತ್ತಲೇ ಬಂದಿದ್ದರೂ ಕೂಡ ಇದುವರೆಗೂ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುತ್ತಿಲ್ಲ. ಇದೀಗ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಕೆಲ ಕಾಲ ಬಸವೇಶ್ವರ ವೃತ್ತದಲ್ಲಿ ನಿಂತು ಘೋಷಣೆ ಕೂಗಿ ಮಿನಿ ವಿಧಾನಸೌಧಕ್ಕೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಇದಕ್ಕೂ ಮೊದಲು ಪ್ರತಿಭಟನಾಕಾರರನ್ನು ಉದ್ದೇಶಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜೀವ ಬಡಿಗೇರ ಮಾತನಾಡಿ, ಈ ಹಿಂದೆ ಹಲವು ಭಾರಿ ಚಿಕ್ಕೋಡಿ ಜಿಲ್ಲಾ ಘೋಷಣೆ ಮಾಡುವಂತೆ ಹೋರಾಟ ಮಾಡಿ ಮನವಿ ಸಲ್ಲಿಸಲಾಗಿದೆ. ಆದ್ರೆ ಈ ಭಾಗದ ಜನಪ್ರತಿನಿಧಿಗಳು ಖ್ಯಾರೆ ಎನ್ನುತ್ತಿಲ್ಲ. ಈ ಭಾಗದ ಜನರ ತೊಂದರೆ ಹೇಳತೀರದ್ದಾಗಿದೆ. ಜಿಲ್ಲೆಯನ್ನಾಗಿ ಘೋಷಣೆ ಮಾಡದೇ ಹೋದಲ್ಲಿ ಮತ್ತೇ ಹೋರಾಟ ಸಮಿತಿಯು ಧರಣಿ, ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಮುಖಂಡ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ” ಈಗಾಗಲೇ ಬಿಜೆಪಿ, ಕಾಂಗ್ರೇಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಈ ಭಾಗದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದಾಗ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುವುದಾಗಿ ಹೇಳುತ್ತಲೇ ಬಂದಿದ್ದು, ಎರಡೂವರೆ ದಶಕಗಳಿಂದಲೂ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಹೋರಾಟ ಮಾಡುತ್ತಲೇ ಬಂದಿದ್ದು, ಈಗಲೂ ಕೂಡ ಚಿಕ್ಕೋಡಿ ಜಿಲ್ಲೆ ಘೋಷಣೆಯಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದರು.
ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಜಯ ಪಾಟೀಲ, ಸಂತೋಷ ಪೂಜೇರಿ, ಪ್ರತಾಪ ಪಾಟೀಲ, ಬಸವರಾಜ ಸಾಜನೆ, ಅಮೂಲ ನಾವಿ, ವಿಜಯ ಬ್ಯಾಳೆ, ಕುಮಾರ ಪಾಟೀಲ, ಸತ್ಯಪ್ಪ ಕಾಂಬಳೆ, ರಮೇಶ ಢಂಗೇರ, ಭೀಮು ನಾಯಕ, ಶ್ರೀಕಾಂತ ಅಸೋದೆ, ರವಿ ನಾಯ್ಕ, ರಫೀಕ ಪಠಾಣ, ಕುಮಾರ ಗುರವ, ಪರಶು ಗಾವಡೆ, ಸಚಿನ ದೊಡಮನಿ, ಕಾನಪ್ಪ ಪಾಡಕರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು