2:23 AM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ

30/11/2023, 01:29

ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ಪರಿಸರದ ನಾಲ್ವರು ಬಾಲಕರು ಆಟವಾಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಕತ್ತಲಾದರೂ ನಂತರ ಮಕ್ಕಳು ವಾಪಸ್ ಬರಲಿಲ್ಲ. ಇದರಿಂದ ಮನೆಯವರು ಗಾಬರಿಗೊಂಡು ಹುಡುಕಾಡಲಾರಂಭಿಸಿದರು. ಈ ವೇಳೆ ಒಟ್ಟು 4 ಮಕ್ಕಳು ನಾಪತ್ತೆಯಾಗಿರುವುದು ಕಂಡು ಬಂತು. ಇದರಲ್ಲಿ ಒಬ್ಬ ಬಾಲಕನಲ್ಲಿ ಮೊಬೈಲ್ ಫೋನ್ ಇತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಅವರು ಉಡುಪಿಯಲ್ಲಿ ಇರುವ ಬಗ್ಗೆ ತೋರಿಸಿತು. ತಕ್ಷಣ ಕಾಸರಗೋಡು ಪೊಲೀಸರು ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದರು. ಉಡುಪಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳು ತಾವೆಲ್ಲರು ಗೋವಾಕ್ಕೆ ಪ್ರವಾಸ ಹೋಗಲು ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು