10:54 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ನಂಜನಗೂಡು: ಕನಕ ಜಯಂತಿ ಆಚರಣೆ; ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ

30/11/2023, 17:24

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶ್ರೀ ಭಕ್ತ ಕನಕದಾಸರ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು
ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ತಹಸಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ತಾಲೂಕು ದಂಡಾಧಿಕಾರಿಗಳಾದ ತಹಶೀಲ್ದಾರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಶಾಸಕರಾದ ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿಯ ಹಾಲಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಶ್ರೀ ಭಕ್ತ ಕನಕದಾಸರು ಶತಮಾನಗಳ ಹಿಂದೆ ಭಾವೈಕ್ಯತೆಯನ್ನು ಸಾರಿದ ಮಹಾನುಭಾವರು. ಕುಲ ಕುಲ ಕುಲವೆಂದು ಹೊಡೆದಾಡುವಿರ ಕುಲದ ನೆಲವ ನೀವು ಬಲ್ಲಿರಾ ಬಲ್ಲಿರಾ ಎಂಬ ವೇದ ವಾಕ್ಯವನ್ನು ಸೃಷ್ಟಿಸಿ ಇಡೀ ದೇಶಕ್ಕೆ ಮತ್ತು ಸಮಾಜಕ್ಕೆ ಉತ್ತಮ ಸಂದೇಶ ಸಾರಿ ಸಮಾಜದ ಉತ್ತಮ ಬೆಳವಣಿಗೆ ಮಾದರಿಯಾದವರು. ಶ್ರೀ ಭಕ್ತ ಕನಕದಾಸರು ಧಾರ್ಮಿಕತೆಯ ಆಚಾರ ವಿಚಾರ ಸಂಪ್ರದಾಯವನ್ನು ಉತ್ತುಂಗಕ್ಕೆ ಏರಿಸುವುದರಲ್ಲಿ ಕನಕದಾಸರ ಪಾತ್ರ ಬಹಳ ಪ್ರಮುಖವಾದದ್ದು. ಕನಕದಾಸರ ಸಿದ್ಧಾಂತವನ್ನು ರೂಢಿಸಿಕೊಂಡು ಸಮಾಜದಲ್ಲಿ ಶಾಂತಿ ಸಹ ಬಾಳ್ವೆಯ ಸಮಾನತೆಯ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದರು.
ಶ್ರೀ ಭಕ್ತ ಕನಕದಾಸರು ಯಾವುದೇ ಒಂದು ವರ್ಗಕ್ಕೆ ಸೀಮಿತವಾದವರಲ್ಲ, ದೇಶ ಮತ್ತು ರಾಜ್ಯದಲ್ಲಿ ಎಲ್ಲಾ ಸಂತರು ಒಂದಲ್ಲ ಒಂದು ರೀತಿಯಲ್ಲಿ ಉತ್ತಮ ಭಾವೈಕ್ಯತೆಯ ಸಂದೇಶವನ್ನು ಸಾರಿದ್ದಾರೆ. ಅವರನ್ನು ಸ್ಮರಿಸಿಕೊಂಡು ಅವರ ಸಿದ್ಧಾಂತವನ್ನು ರೂಢಿಸಿಕೊಂಡು ಯುವ ಪೀಳಿಗೆಗೆ ಮಾದರಿಯಾಗುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿರುತ್ತದೆ. ಶ್ರೀ ಭಕ್ತ ಕನಕದಾಸರ ವೇದ ವಾಕ್ಯಗಳು ಇನ್ನು ನೂರು ವರ್ಷ ಕಳೆದರೂ ಸಹ ಸಮಾಜದಲ್ಲಿ ಅಚ್ಚಳಿಯದಂತೆ ರಾರಾಜಿಸುತ್ತವೆ. ಕನಕದಾಸರ ವೇದ ವಾಕ್ಯಗಳನ್ನು ಜೀವನದಲ್ಲಿ ರೂಢಿಸಿಕೊಂಡು ಶಾಂತಿ ಸಹಬಾಳ್ವೆಯಿಂದ ಬದುಕು ಸಾಗಿಸಬೇಕು ಎಂದು ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಶಿವಕುಮಾರ್, ಇಒ ಜೆರಾಲ್ಡ್ ರಾಜೇಶ್, ವಿವಿಧ ಸಂಘಟನೆಗಳ ಮುಖಂಡರು, ತಾಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು