10:07 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ರಕ್ತದಾನ ಶಿಬಿರ: ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ಸಂಗ್ರಹ

30/11/2023, 19:17

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್, ಎಚ್ ಡಿಎಫ್ ಸಿ ಬ್ಯಾಂಕ್ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.


ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಶಾಂತರಾಮ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “ಅಗತ್ಯವಿರುವ ವ್ಯಕ್ತಿಗೆ ರಕ್ತದಾನ ಮಾಡುವುದು ಮನುಕುಲದ ಅಸಾಧಾರಣ ಸೇವೆ. ರಕ್ತಕ್ಕೆ ಧರ್ಮವಿಲ್ಲ, ಅದು ಅನನ್ಯ. ಜೀವ ಉಳಿಸುವ ದ್ರವವು ಒಬ್ಬ ವ್ಯಕ್ತಿಯನ್ನು ಸಾವಿನ ದವಡೆಯಿಂದ ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡುವುದರಿಂದ ಆರೋಗ್ಯವಂತರಾಗಿ ಬಾಳಬಹುದು ಎಂದರು. ಲಯನ್ಸ್ ಕ್ಲಬ್ ನ ಗಣೇಶ್ ಡಿ. ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ರಕ್ತದಾನವು ಮಾನವೀಯತೆಯ ಸೂಚಕವಾಗಿದೆ. ಇದು ಆರ್ಥಿಕ ವೆಚ್ಚವಿಲ್ಲದ ಉದಾತ್ತ ಕಾರ್ಯವಾಗಿದೆ ಎಂದು ಹೇಳಿದರು.
ಮಂಗಳೂರು ಎಚ್ ಡಿಎಫ್ ಸಿ ಬ್ಯಾಂಕ್ ವ್ಯವಸ್ಥಾಪಕ ಕಿರಣ್ ಶೆಟ್ಟಿ ಅವರು ಶುಭ ಹಾರೈಸಿದರು. ಕೆನರಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಎಂ.ರಂಗನಾಥ ಭಟ್ ಅಧ್ಯಕ್ಷತೆ ವಹಿಸಿದ್ದು,ಮಾನವೀಯತೆ ಇನ್ನೊಬ್ಬರಿಗೆ ಸಲ್ಲಿಸುವ ಸಮರ್ಪಣೆಯಲ್ಲಿ ಅಡಗಿದೆ. ಅದು ಪದಗಳಿಗೆ ಮೀರಿದ ತೃಪ್ತಿ ನೀಡುತ್ತದೆ. ಅವುಗಳಲ್ಲಿ ರಕ್ತದಾನವು ಒಂದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಸ್ವಾಗತಿಸಿದರು. ರಾಸೇಯೋ ಅಧಿಕಾರಿ ಸೀಮಾ ಪ್ರಭು ಎಸ್. ವಂದಿಸಿದರು. ಲಿಖಿತ್ ನಿರೂಪಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ , ಯೂತ್ ರೆಡ್ ಕ್ರಾಸ್ ಅಧಿಕಾರಿಗಳಾದ ರೂಪಶ್ರೀ, ರಶ್ಮಿ , ರಾಸೇಯೋ ಅಧಿಕಾರಿ ಕೀರ್ತನಾ ಎಂ. ಭಟ್, ಲಯನ್ಸ್ ಸೇವಾ ಸಂಸ್ಥೆಯ ವಿವಿಧ ಪದಾಧಿಕಾರಿಗಳಾದ ಉಮಾ ಬಿ. ಹೆಗ್ಡೆ, ಸುಮಿತ್ರಾ ಶೆಟ್ಟಿ, ವಿನೋದ್ ಪ್ರಭು, ವಿದ್ಯಾ ಕಾಮತ್, ಮಾಲಾ ಕಿಶೋರ್, ಸಂಧ್ಯಾ, ಸತೀಶನ್ ಮುಂತಾದವರು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳಿಂದ 156 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು