9:06 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಅವರಿಂದ ಆಟೋ ಚಾಲಕರಿಗೆ ಜಾಗೃತಿ, ದಂಡದ ಎಚ್ಚರಿಕೆ

30/11/2023, 19:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್, ಕೊಟ್ಟಿಗೆಹಾರದಲ್ಲಿ ಆಟೋ ಚಾಲಕರ ವಾಹನ ದಾಖಲೆ ಪರಿಶೀಲನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‍, ಕೊಟ್ಟಿಗೆಹಾರದಲ್ಲಿ ಆಟೋ ವಾಹನ ಚಾಲಕರ ವಾಹನ ದಾಖಲೆಗಳನ್ನು ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಪರಿಶೀಲನೆ ಮಾಡಿದರು.


ನಂತರ ಕೊಟ್ಟಿಗೆಹಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಣಕಲ್, ಕೊಟ್ಟಿಗೆಹಾರದಲ್ಲಿ ಅನೇಕ ಆಟೋಗಳಿವೆ. ಆದರೆ ಕೆಲವು ಆಟೋಗಳಿಗೆ ಯಾವುದೇ ದಾಖಲೆಗಳಿಲ್ಲ. ಕಳೆದ ಕೆಲವು ದಿನಗಳ ಹಿಂದೆ ಆಟೋವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಆದರೆ ಡಿಕ್ಕಿ ಹೊಡೆದ ಆಟೋದಲ್ಲಿ ದಾಖಲೆಗಳು ಸರಿಯಿಲ್ಲದೇ ಮೃತ ವ್ಯಕ್ತಿಗೆ ಪರಿಹಾರವೇ ಸಿಗದೇ ಕುಟುಂಬ ಪರದಾಡುವಂತಾಗಿದೆ. ಅದಕ್ಕಾಗಿ ಬಣಕಲ್, ಕೊಟ್ಟಿಗೆಹಾರದಲ್ಲಿ ಎಲ್ಲಾ ಆಟೋಗಳ ವಾಹನ ಚಾಲಕರ ಪರವಾನಗಿ, ಎಫ್ ಸಿ, ಹೊಗೆ ತಪಾಸಣೆ, ಮತ್ತಿತರ ವಾಹನ ದಾಖಲೆ ಪರಿಶೀಲಿಸಲಾಗಿದೆ. ಯಾರ ವಾಹನಗಳ ದಾಖಲೆಗಳು ಸರಿಯಿಲ್ಲ ಅವರು ಕೂಡಲೇ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಲು ಸೂಚಿಸಲಾಗಿದೆ. ಸೂಚನೆ ಕೊಟ್ಟ ನಂತರವೂ ಕೂಡ ದಾಖಲೆಗಳನ್ನು ನವೀಕರಿಸಿ ಇಡದಿದ್ದರೆ ಅಂಥವರ ವಾಹನಗಳನ್ನು ವಶಕ್ಕೆ ಪಡೆದು ದಂಡ ಹಾಕಲಾಗುವುದು ಎಂದು ಎಚ್ಚರಿಸಿದರು.
ಬರೀ ದಾಖಲೆ ಮಾತ್ರವಲ್ಲದೇ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಆಟೋ ಮಾತ್ರವಲ್ಲ ಇತರ ವಾಹನಗಳ ಚಾಲಕರು ಕೂಡ ಸಂಚಾರಿ ನಿಯಮ ಪಾಲಿಸಿ ವಾಹನಗಳ ದಾಖಲೆಗಳನ್ನು ಇಟ್ಟುಕೊಳ್ಳಬೇಕು ಎಂದು ಆಟೋ ವಾಹನ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು