1:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಬಣಕಲ್- ದೇವರಮನೆ ರಸ್ತೆ ಸೇತುವೆ: ಹಲವು ಗ್ರಾಮಗಳ ಸಂಪರ್ಕ ಕಡಿತ ಸಾಧ್ಯತೆ

30/11/2023, 19:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮುಖಂಡ ಬಿ.ಎಸ್. ವಿಕ್ರಂ ಮಾತನಾಡಿ, ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ. ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ.


ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು